ಕಾನೂನು

ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

579

ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ.

ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ ರಾಜ್ಯಕ್ಕೆ ಸಂಭಂದಪಡುವುದಿಲ್ಲ.

ಅಷ್ಟಕ್ಕೂ ಈ ಕಾನೂನು ರಚನೆಯಾದದ್ದು ಏಕೆ ಗೊತ್ತಾ? ತಿಳಿಯಲು ಮುಂದೆ ಓದಿ…

ನಿಮಗೆ ಗೊತ್ತಾ 370ನೇ ವಿಧಿ ಕಾನೂನು ಏನು ಹೇಳುತ್ತೆ ಅಂತ ?

 ಯಾವುದೇ ಒಂದು ರಾಜ್ಯಕ್ಕೆ ತಾತ್ಕಾಲಿಕವಾಗಿ ವಿಶೇಷ ಸ್ಥಾನಮಾನ ಕಲ್ಪಿಸಲು ಭಾರತದ ಸಂವಿಧಾನದ 21ನೇ ಪರಿಚ್ಛೇದ ಅನ್ವಯವಾಗುತ್ತದೆ. ಪ್ರಾಂತೀಯ ಸರಕಾರಕ್ಕೆ ಸಾಕಷ್ಟು ಅಧಿಕಾರವನ್ನು ದಯಪಾಲಿಸುವ ವಿಧಿಯೇ 370. ಇದರ ಪ್ರಕಾರ ಒಂದು ಪ್ರಾಂತ್ಯಕ್ಕೆ ತಾತ್ಕಾಲಿಕವಾಗಿ (ಆ ಸಂದರ್ಭಕ್ಕೆ ಅಗತ್ಯವಿದ್ದಂತೆ) ವಿಶೇಷ ಸ್ಥಾನಮಾನವನ್ನು ಕಲ್ಪಿಸಬಹುದು. ಅಂತಹ ಸ್ಥಾನ ಪಡೆದ ರಾಜ್ಯ, ದೇಶದ ಎಲ್ಲ ರಾಜ್ಯಗಳಿಗೂ ಅನ್ವಯವಾಗುವ ಕಾನೂನಿನಿಂದ ಮುಕ್ತ. ಕೆಲವು ಕ್ಷೇತ್ರಗಳ ಹೊರತಾಗಿ ಉಳಿದೆಲ್ಲ ವಿಚಾರಗಳನ್ನು ಅಲ್ಲಿನ ವಿಧಾನಸಭೆಗೇ ಬಿಡಬೇಕು.

ಈ ಸೌಲಭ್ಯ ಜಾರಿಗೆಯಾಗಿದ್ದು ಯಾವಾಗ ?

ಈ ಸೌಲಭ್ಯ ಜಾರಿಗೆ ಬಂದಿದ್ದು, 1947ರಲ್ಲಿ. ಆಗ ಶೇಖ್ ಅಬ್ದುಲ್ಲಾ ಎಂಬುವರನ್ನು ಜಮ್ಮು ಕಾಶ್ಮೀರದ ಪ್ರಧಾನಿಯಾಗಿ ಮಹಾರಾಜಾ ಹರಿಸಿಂಗ್ ಹಾಗೂ ಜವಾಹರಲಾಲ್ ನೆಹರು ನೇಮಿಸಿದ್ದರು. ಅಂದು ರಾಜ್ಯದ ಪ್ರಧಾನಿಯಾಗಿ ಹೊಂದಿದ್ದ ಸ್ವಾಯತ್ತತೆಯನ್ನು ಎಲ್ಲ ಸಮಯಕ್ಕೂ ಉಳಿಸಿಕೊಳ್ಳುವ ಉದ್ದೇಶ ಹೊಂದಿದ್ದ ಅಬ್ದುಲ್ಲಾ 370ನೇ ವಿಧಿಯನ್ನು ಶಾಶ್ವತಗೊಳಿಸಬೇಕೆಂದು ವಾದಿಸಿದ್ದ. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಕೊಂಡಿರಲಿಲ್ಲ.

ಜಮ್ಮು ಕಾಶ್ಮೀರಕ್ಕೆ ನೀಡಲಾಯಿತು?

1947ರ ಆಗಸ್ಟ್ 14, 15ರಂದು ಕ್ರಮವಾಗಿ ಭಾರತ ಮತ್ತು ಪಾಕಿಸ್ತಾನ ಸ್ವತಂತ್ರಗೊಂಡವು. ಆ ವೇಳೆ ಕಾಶ್ಮೀರವನ್ನು ಒಂದು ಸ್ವತಂತ್ರ ರಾಜ್ಯವನ್ನಾಗಿ ಘೋಷಿಸಲಾಗಿತ್ತು. ಆ ರಾಜ್ಯದ ಮೇಲೆ ಎರಡೂ ದೇಶಗಳು ದಾಳಿ ಮಾಡಬಾರದೆಂಬ ನಿರ್ಣಯ ಕೈಗೊಳ್ಳಲಾಯಿತು. ಆದರೆ ಪಾಕಿಸ್ತಾನ ಕಾಶ್ಮೀರವನ್ನು ತನ್ನದಾಗಿಸಿಕೊಳ್ಳಬೇಕೆಂಬ ಪ್ರಯತ್ನವನ್ನು ಕೈಬಿಡಲಿಲ್ಲ.

1947 ಅ. 6ರಂದು ಪಾಕ್ ಬೆಂಬಲಿತ ‘ಆಜಾದ್ ಕಾಶ್ಮೀರ್’ ಎಂಬ ಪಡೆಯು ಪಾಕ್ ಮೇಲೆ ಮುಗಿಬಿತ್ತು. ಆಗ ಕಾಶ್ಮೀರವನ್ನು ಆಳುತ್ತಿದ್ದ ಮಹಾರಾಜ ಹರಿಸಿಂಗ್ ತಮ್ಮ ರಾಜ್ಯವನ್ನು ರಕ್ಷಿಸುವಂತೆ ಭಾರತವನ್ನು ಕೋರಿದರು. ಕಾಶ್ಮೀರವನ್ನು ಭಾರತಕ್ಕೆ ಸಂಪೂರ್ಣವಾಗಿ ಒಪ್ಪಿಸಿದರೆ ನೆರವು ನೀಡುವುದಾಗಿ ಆಗ ಭಾರತ ಸರಕಾರ ಹೇಳಿತ್ತು. ಇದಕ್ಕೆ ಹರಿಸಿಂಗ್ ಸುತರಾಂ ಒಪ್ಪಲಿಲ್ಲ.

ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿದ ಅಂದಿನ ಪ್ರಧಾನಿ ಪಂಡಿತ್ ಜವಹರ್‌ಲಾಲ್ ನೆಹರೂ ಒಂದು ಒಪ್ಪಂದಕ್ಕೆ ಬಂದರು. ”ಭಾರತದೊಂದಿಗೆ ಜಮ್ಮು ಕಾಶ್ಮೀರ ವಿಲೀನವಾಗಬೇಕು, ಭಾರತದ ಸಂವಿಧಾನದ 370ನೇ ವಿಧಿ ಪ್ರಕಾರ ರಕ್ಷಣೆ, ವಿದೇಶಾಂಗ ಮತ್ತು ಸಂವಹನ ಕ್ಷೇತ್ರಗಳ ಹೊರತಾಗಿ ಇನ್ಯಾವುದೇ ವಿಷಯದಲ್ಲಿ ಭಾರತದ ಕಾನೂನುಗಳು ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ.” ಆ ಕರಾರುಗಳಿಗೆ ಸಹಿ ಬಿದ್ದಾಗಿನಿಂದ ಜಮ್ಮು ಕಾಶ್ಮೀರಕ್ಕೆ 370ನೇ ವಿಧಿ ಅನ್ವಯವಾಗಿದೆ.

ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ..?

ಪ್ರತಿ ವಿಷಯದಲ್ಲಿಯೂ ಪ್ರತ್ಯೇಕ ಹೆಜ್ಜೆ ತುಳಿಯಲು ಕಾನೂನುಬದ್ಧ ಅಧಿಕಾರ ಹೊಂದಿರುವ ಕಾಶ್ಮೀರ ಈಗ ಕೈಲಿದ್ದರೂ ಇಲ್ಲದ ಸ್ಥಿತಿ. ಏಕೆಂದರೆ ಸಂವಿಧಾನದ 238ನೇ ವಿಧಿ ಬೇರೆಲ್ಲಾ ರಾಜ್ಯಗಳಿಗೆ ಅನ್ವಯವಾದರೂ ಜಮ್ಮು- ಕಾಶ್ಮೀರಕ್ಕಲ್ಲ. ಆ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಸಂಸತ್‌ಗಿಲ್ಲ.

ಒಂದು ವೇಳೆ ಸಂಸತ್ ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸಲೇಬೇಕೆಂದಿದ್ದರೆ ಅದನ್ನು ರಾಷ್ಟ್ರಪತಿ ಮೂಲಕ ರಾಜ್ಯ ಸರಕಾರಕ್ಕೆ ಮುಟ್ಟಿಸಿ ಆ ರಾಜ್ಯದ ವಿಧಾನಸಭೆಯಲ್ಲಿ ಮಂಡನೆ ಮಾಡಬೇಕು. ಜತೆಗೆ ಕೆಲವು ಕಾನೂನುಗಳನ್ನು ಅಲ್ಲಿನ ಸರಕಾರದ ಅನುಮತಿ ಪಡೆದು ಸಂಸತ್‌ನಲ್ಲಿ ಮಂಡನೆ ಮಾಡಬಹುದು.

ಭಾರತದ ಸಂವಿಧಾನವೇ ಒಂದಾದರೆ ಕಾಶ್ಮೀರಕ್ಕೇ ಪ್ರತ್ಯೇಕ ಸಂವಿಧಾನ..!

ಅಂದರೆ, ಭಾರತದ ಸಂವಿಧಾನವೇ ಒಂದಾದರೆ ಕಾಶ್ಮೀರಕ್ಕೇ ಪ್ರತ್ಯೇಕ ಸಂವಿಧಾನ. ಅದರ ತಿದ್ದುಪಡಿಯಾಗುವುದೂ ಆ ರಾಜ್ಯದ ವಿಧಾನಸಭೆಯಲ್ಲಿ. ಅಲ್ಲಿ ಕೈಗೊಳ್ಳಲಾಗವ ನಿರ್ಧಾರಗಳನ್ನು ಆ ರಾಜ್ಯ ಸರಕಾರದ ಅನುಮತಿ ಪಡೆದು ರಾಷ್ಟ್ರಪತಿ ಸಹಿ ಹಾಕಬೇಕಾಗುತ್ತದೆ. ಈ ರೀತಿ ಪ್ರತ್ಯೇಕ ಸಂವಿಧಾನ ಹೊಂದಿರುವ ಏಕೈಕ ರಾಜ್ಯ ಜಮ್ಮು ಕಾಶ್ಮೀರ. 1957ರ ಜನವರಿ 26ರಂದು ಅಲ್ಲಿನ ವಿಧಾನಸಭೆ ಪ್ರತ್ಯೇಕ ಸಂವಿಧಾನವನ್ನು ಅಂಗೀಕರಿಸಿತು.

ಕಾಶ್ಮೀರಕ್ಕೆ ತುರ್ತು ಪರಿಸ್ಥಿತಿಯೂ ಅನ್ವಯವಾಗುವುದಿಲ್ಲ…

ಸಂವಿಧಾನದ ವಿಧಿ 360ರ ಪ್ರಕಾರ ಕೇಂದ್ರ ಸರಕಾರ ದೇಶಾದ್ಯಂತ ಆರ್ಥಿಕ ತುರ್ತುಸ್ಥಿತಿ ಘೋಷಿಸುವ ವಿಶೇಷ ಅಧಿಕಾರ ಹೊಂದಿರುತ್ತದೆ. ಆದರೆ, ಆರ್ಥಿಕ ತುರ್ತುಸ್ಥಿತಿಯನ್ನು ಈ ರಾಜ್ಯದಲ್ಲಿ ಘೋಷಿಸುವಂತಿಲ್ಲ. ಹೊರ ದೇಶಗಳು ಅತಿಕ್ರಮಣ ನಡೆಸಿದಾಗ ಇಲ್ಲವೇ ಯುದ್ಧದ ಸಮಯದಲ್ಲಿ ಮಾತ್ರ ತುರ್ತುಸ್ಥಿತಿ ಘೊಷಿಸಬಹುದು.

ದೇಶದಲ್ಲಿ ಆಂತರಿಕ ಸಮಸ್ಯೆಗಳು ತಲೆದೋರಿದ ಸಮಯದಲ್ಲಿ ಜಮ್ಮು ಕಾಶ್ಮೀರ ತುರ್ತುಸ್ಥಿತಿಯಂತಹ ಸನ್ನಿವೇಶದಿಂದ ಮುಕ್ತವಾಗಿರುತ್ತದೆ. ಹಾಗೊಂದು ವೇಳೆ ಈ ರಾಜ್ಯದಲ್ಲಿ ತುರ್ತುಸ್ಥಿತಿ ಘೋಷಣೆಯಾಗಲೇಬೇಕೆಂದರೆ ಅದಕ್ಕೆ ಅಲ್ಲಿನ ರಾಜ್ಯ ಸರಕಾರದ ಅನುಮತಿ ಬೇಕು. ರಾಷ್ಟ್ರಪತಿಯಾದವರು ಆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಅಲ್ಲಿನ ಸರಕಾರಕ್ಕೆ ಕೋರಿಕೆ ಸಲ್ಲಿಸಬೇಕು.

ಇಲ್ಲಿನ ನಿಯಮಗಳಿಂದ ಈ ರಾಜ್ಯದವರು ಅನುಭವಿಸುತ್ತಿರುವ ಸಮಸ್ಯಗಳೇನು?

ಬೇರೆ ರಾಜ್ಯದಿಂದ ಬಂದವರು ಈ ರಾಜ್ಯದಲ್ಲಿ ಆಸ್ತಿ ಖರೀದಿಸುವಂತಿಲ್ಲ. ಆದರೆ, ಈ ರಾಜ್ಯದವರು ಭಾರತದ ಬೇರೆ ರಾಜ್ಯಗಳಲ್ಲಿ ಆಸ್ತಿ ಖರೀದಿಸಬಹುದು.ಈ ನಿಯಮವೇ ಜಮ್ಮು ಕಾಶ್ಮೀರವು ಭಾರತದಿಂದ ಬೇರೆ ಎಂಬ ಭಾವನೆ ಬೆಳೆಯಲು ಕಾರಣವಾಗಿದೆ. ಅಲ್ಲಿನವರಿಗೆ ಕೂಡ ತಾವು ಸಂಪೂರ್ಣ ಭಾರತೀಯರು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ರಾಜ್ಯದ ಹೊರತಾಗಿ ಬೇರೆಯವರು ಬಂಡವಾಳ ತೊಡಗಿಸಲು ಅವಕಾಶವಿಲ್ಲದ ಕಾರಣ ಇಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಇದಕ್ಕಾಗಿಯೇ ಸ್ಥಳೀಯರು ಶಸ್ತ್ರ ಕೈಗೆತ್ತಿಕೊಂಡು ಉಗ್ರರಾಗುತ್ತಿದ್ದಾರೆಂದು ವರದಿ ಹೇಳುತ್ತದೆ.

ಸ್ವಾತಂತ್ರ್ಯ ಬಂದಾಗಿನಿಂದ ಶಿಕ್ಷಣದ ಹಕ್ಕನ್ನು ಬಿಟ್ಟರೆ ಇನ್ಯಾವ ಹಕ್ಕೂ ಈ ರಾಜ್ಯದಲ್ಲಿ ಜಾರಿಯಾಗಿಲ್ಲ. ಮತ್ತೊಂದು ವಿಚಾರವೆಂದರೆ ಈ ರಾಜ್ಯದ ನಾಗರಿಕನಾದವನು ತೆರಿಗೆ ಕಟ್ಟಬೇಕಾಗಿಲ್ಲ. ದೇಶದ ಎಲ್ಲಾ ಹೈಕೋರ್ಟುಗಳು ಸಂವಿಧಾನದ ವಿಧಿ 226ರ ಪ್ರಕಾರ ಕಾನೂನು ತಿದ್ದುಪಡಿ ಮಾಡುವ ಅಧಿಕಾರವನ್ನು ಹೊಂದಿವೆ. ಆದರೆ, ಜಮ್ಮು ಕಾಶ್ಮೀರ ಹೈಕೋರ್ಟ್ ಮಾತ್ರ ಇದರಿಂದ ಮುಕ್ತ.

ಯಾವ ಕಾನೂನುಗಳನ್ನೂ ಅಸಾಂವಿಧಾನಿಕ ಎಂದು ಘೋಷಿಸುವ ಹಕ್ಕೇ ಇಲ್ಲಿನ ಕೋರ್ಟ್‌ಗೆ ಇಲ್ಲ. ಈ ರಾಜ್ಯದ ಶಾಶ್ವತ ನಾಗರಿಕರು ಮಾತ್ರ ರಾಜ್ಯ ಸರಕಾರದ ಸೇವೆಗಳಿಗೆ ಅರ್ಹರು. ಶಾಶ್ವತ ನಾಗರಿಕರಿಗೆ ಮಾತ್ರ ಆಸ್ತಿ ಖರೀದಿಸುವ ಹಕ್ಕಿದೆ. ವಿದ್ಯಾರ್ಥಿವೇತನ, ಹಿಂದುಳಿದ ವರ್ಗದವರಿಗೆ ಮೀಸಲಾತಿ ಈ ಎಲ್ಲ ವಿಚಾರದಲ್ಲಿ ಜಮ್ಮು ಕಾಶ್ಮೀರ ವಿಧಾನಸಭೆ ನಿರ್ಣಯವೇ ಅಂತಿಮ. ಒಂದು ವೇಳೆ ರಾಷ್ಟ್ರಪತಿ ಆಡಳಿತ ಹೇರಬೇಕೆಂದರೂ, ರಾಷ್ಟ್ರಪತಿ ಜಮ್ಮು ಕಾಶ್ಮೀರದ ಗವರ್ನರ್ ಅನುಮತಿ ಪಡೆಯಬೇಕು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ