ಸುದ್ದಿ

ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

229

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ  ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ  ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

2018ನೇ ಸಾಲಿನ  ಬಜೆಟ್’ನ ಪ್ರಮುಖ ಅಂಶಗಳು:-

  • ಕೃಷಿ ಉತ್ಪನ್ನಗಳಿಗೆ ಮೀಸಲು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚಳ ಮಾಡುವುದಾಗಿ ಘೋಷಣೆ.
  • ಕೃಷಿ ಚಟುವಟಿಕೆಗಳಿಗೆ ಸಾಲ ನೀಡುವ ಸಲುವಾಗಿ, ಅನುದಾನದ ಮೊತ್ತವನ್ನು 11 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳ.
  • ಕೃಷಿ ಮಾರುಕಟ್ಟೆ ಅಭಿವೃದ್ದಿಗಾಗಿ 22 ಸಾವಿರ ಕೋಟಿ ಅನುದಾನ.

  • ಈಗಿರುವ ಉಜ್ವಲ ಯೋಜನೆ ಅಡಿಯಲ್ಲಿ, ದೇಶದ ಸುಮಾರು ಎಂಟು ಕೋಟಿ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ.
  • ನಾಲ್ಕು ಕೋಟಿ ಬಡ ಕುಟುಂಬಗಳಿಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್‌ ಸಂಪರ್ಕ.
  • ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 56,619 ಕೋಟಿ ರೂ.
  • ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ 39,135 ಕೋಟಿ ರೂ.
  • ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ  3 ಲಕ್ಷ ಕೋಟಿ ಸಾಲ.
  • 70 ಎಪಿಎಂಸಿಗಳನ್ನು ಇ-ನ್ಯಾಮ್‌ ಮೂಲಕ ಸಂಪರ್ಕ
  • ಕೃಷಿ ಬೆಂಬಲ ಬೆಲೆ ನೆರೆ ರೈತರಿಗೆ ಸಿಗಲು ಕ್ರಮ.
  • ಬುಡಕಟ್ಟು ಜನರ ಶಿಕ್ಷಣಕ್ಕಾಗಿ ಏಕಲವ್ಯ ಶಾಲೆಗಳ ಆರಂಭ.
  • ರೈಲುಗಳಲ್ಲಿ  ವೈ-ಫೈ ಮತ್ತು ಸಿಸಿಟಿವಿ ವ್ಯವಸ್ತೆ.
  • ಹೊಸ ಉದ್ಯೋಗಿಗಳ ಇಪಿಎಫ್‌ ಖಾತೆಗಳಿಗೆ ಶೇ 12ರ ವೇತನ ಸರಕಾರದಿಂದ.
  • 9,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ
  • ಶಾಲೆಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳಿಗೆ ಒಂದು ಲಕ್ಷ ಕೋಟಿ.
  • ಬಡ್ಡಿ ಆದಾಯದ ಮೇಲಿನ ತೆರಿಗೆ ಮಿತಿ ಹೆಚ್ಚಳ.
  • ಸ್ಮಾರ್ಟ್ ಸಿಟಿಗಳಿಗೆ 2.04 ಲಕ್ಷ ಕೋಟಿ ರೂ. ಅನುದಾನ
  • ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ ರೂಪಾಯಿ ಮತ್ತು ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.
  • ಬಡವರಿಗೆ ಕಡಿಮೆ ವೆಚ್ಚದಲ್ಲಿ ಮನೆ.
  • 42 ಮೆಗಾ ಫುಡ್ ಪಾರ್ಕ್ಗಳ ಗೋಷಣೆ.

ಏರಿಕೆಯಾಗಲಿರುವ ವಸ್ತುಗಳು :-

ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಈ ಸಲದ ಬಜೆಟ್’ನಲ್ಲಿ ಮೊಬೈಲ್ ಫೋನ್ ಮೇಲಿನ ಅಬಕಾರಿ ಸುಂಕವನ್ನು 15% ನಿಂದ 20% ಗೆ ಏರಿಸಲಾಗಿದೆ. ಅಲ್ಲಿಗೆ ಆ್ಯಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಭಾರತದಲ್ಲೇ ಉತ್ಪಾದಿಸುವ ಮೊಬೈಲ್ ಫೋನ್‍ಗಳ ಬೆಲೆಗೆ ಅಂತರ ಹೆಚ್ಚಲಿದೆ.

ಏರಿಕೆಯಾಗಲಿದೆ ಐಫೋನ್

ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿಗಳ ಬೆಲೆ ಏರಿಕೆ :-

ಟಿ.ವಿ  ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಪೆಟ್ರೋಲ್,ಡೀಸೆಲ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರು. ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು 6 ರುಪಾಯಿ ಇಳಿಸುವುದಾಗಿ ಜೇಟ್ಲಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿದ್ದರೂ. ರಸ್ತೆ ಮತ್ತು ಮೂಲ ಸೌಕರ್ಯ ಹೆಸರಲ್ಲಿ 8 ರೂ. ಹೊಸ ಸೆಸ್ ಹಾಕುವ ಮೂಲಕ ದರವನ್ನು ಯಥಾಸ್ಥಿತಿಯಲ್ಲಿ ಇಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಏನು ಕೊಡುಗೆ….

ಶಿಕ್ಷಣ ಕೇತ್ರದಲ್ಲಿ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

  • ಹೊಸ 24 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
  • 2012ರ ವೇಳೆಗೆ ಶಿಕ್ಷಣದಲ್ಲಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪುನಶ್ಚೇತನ (RISE) ಮರು ಜಾರಿ
  • ಕಪ್ಪು ಹಲಗೆಗಳ ಬದಲು ಡಿಜಿಟಲ್‌ ಬೋರ್ಡ್‌ಗಳ ಬಳಕೆ
  • ಶಿಕ್ಷಕರಿಗೆ ಕೇಂದ್ರ ಸರ್ಕಾರದಿಂದ ತರಬೇತಿ
  • ಬುಡಕಟ್ಟು ಹಾಗೂ ಆದಿವಾಸಿ ಮಕ್ಕಳಿಗಾಗಿ ಶಾಲೆಗಳ ಸಂಖ್ಯೆಯಲ್ಲಿ ಹೆಚ್ಚಳ
  • ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ನವೋದಯ ಮಾದರಿಯಲ್ಲಿ ಏಕಲವ್ಯ ಶಾಲೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…