ಮನರಂಜನೆ

ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

330

ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ  ಬಂದಿದ್ದಾರೆ.

 

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ  ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

 

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ  ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ  ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು  ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-

ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…

 ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು  ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಸ್ಪೂರ್ತಿ

    ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…