ಆಧ್ಯಾತ್ಮ

ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

2680

 ವಸುದೇವಸು ತಮ್ದೇವಂ ಕಂಸ ಚಾಣೂರ ಮರ್ಧನಂ|                                                                                                                                       ದೇವಕೀ ಪರಮಾನಂಧಂ ಶ್ರೀ ಕೃಷ್ಣಂ ವಂದೇ ಜಗದ್ಗುರಂ||

ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ .

ಶ್ರಾವಣ ಮಾಸದ ಬಹುಳ ಅಷ್ಟಮಿಯ೦ದು ಹಿ೦ದೂಗಳು ಭಕ್ತಿಯಿ೦ದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ಇದೊ೦ದು ಜನಪ್ರಿಯವೂ – ವರ್ಣರ೦ಜಿತವೂ ಆದ ಹಬ್ಬ. ಭಗವಾನ್ ಮಹಾ ವಿಷ್ಣುವಿನ ಎ೦ಟನೆಯ ಅವತಾರವಾದ ಶ್ರೀ ಕೃಷ್ಣನು ಜನಿಸಿದ ದಿನವಾದ್ದರಿ೦ದ ಈ ದಿನವನ್ನು ಜನ್ಮಾಷ್ಟಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಎ೦ದು ಕರೆಯಲಾಗುತ್ತದೆ.

ಪುರಾಣ ಹಿನ್ನೆಲೆ

  • ಶ್ರಾವಣಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.

  • ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.
  • ಕೃಷ್ಣನುಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ 8 ನೇ ಮಗನಾಗಿ ಜನಿಸಿದನು. ಮಥುರ (ಈಗಿನ ಉತ್ತರಪ್ರದೇಶದ ಮಥುರ ಜಿಲ್ಲೆ) ಯಾದವ ಕುಲದ ರಾಜಧಾನಿಯಾಗಿತ್ತು.

  • ಕಂಸ ತಂದೆ ಉಗ್ರಸೇನರನ್ನು ಬಂಧಿಸದಲ್ಲಿಟ್ಟು, ತಾನು ರಾಜನಾಗಿದ್ದನು. ನಂತರ ತನ್ನ ಪ್ರೀತಿಪಾತ್ರಳಾದ ತಂಗಿ ದೇವಕಿಗೆ ಮದುವೆ ಮಾಡುತ್ತಾನೆ. ಅಣ್ಣ ಕಂಸನುದೇವಕಿ-ವಸುದೇವರ ಮದುವೆಯಾದ ಮೇಲೆ ಅವರನ್ನು ಗಂಡನ ಮನೆಗೆ ಕರೆದೊಯ್ಯುತ್ತಿದ್ದಾಗ, ಅವನಿಗೆ ಒಂದು ಅಶರೀರವಾಣಿ ಕೇಳಿಸಿತು. ಅದರ ಪ್ರಕಾರ ದೇವಕಿಯ ಎಂಟನೇ ಮಗುವೂ ಕಂಸನ ವಧನವನ್ನು ಮಾಡುತ್ತದೆ ಎಂದು.

ಮೂಲ

  • ಇದನ್ನು ಕೇಳಿದ ಕಂಸನು ದೇವಕಿಯನ್ನು ಆ ತಕ್ಷಣವೇ ಕೊಲ್ಲಲು ಹೊರಟನು. ಆಗ ವಸುದೇವನು ಅವನನ್ನು ತಡೆದು ಪ್ರತಿ ಮಗುವನ್ನು ಹುಟ್ಟಿದ ತಕ್ಷಣ ಕಂಸನ ಮಡಿಯಲ್ಲಿ ಅರ್ಪಿಸುವುದು ಎಂದು ಹೇಳಿದನು. ಅವರನ್ನು ಬಂಧಿಸಿ ಅವರಿಗೆ ಹುಟ್ಟಿದ 7 ಮಕ್ಕಳನ್ನು ಕೊಂದನು. 8 ನೇ ಮಗು ಕೃಷ್ಣನನ್ನು ಅವನಿಗೆ ತಿಳಿಯದ ಹಾಗೆಯಮುನಾ ದಾಟಿ ಗೋಕುಲಕ್ಕೆ ಕರೆದು ಕೊಂಡು ಹೋದನು.

ಮೂಲ

  • ಅಲ್ಲಿ ಆಗ ತಾನೆ ಹುಟ್ಟಿದ್ದ ಯಶೋದೆ ಮಗಳನ್ನು ಇಲ್ಲಿಗೆ ತಂದನು. ಆದರೆ ಕಂಸ ಅವಳನ್ನು ಕೊಲ್ಲಲು ಬಂದಾಗ ಅವಳು ವಿಷ್ಣುವಿನ ಸಹಾಯಕಿ ಯೋಗಮಾಯಾ ರೂಪಕ್ಕೆ ಬದಲಾಗಿ ಅವನ ಸಾವಿನ ಬಗ್ಗೆ ಅರಿಯಬೇಕೆಂದು ಹೇಳಿ ಮಾಯವಾದಳು.

ಮೂಲ

“ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ|

ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ”||

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ