ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ. ಆದರೆ, ಇಂದಿನ ಧಾವಂತದ ಜೀವನದಲ್ಲಿ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇದು ಸಾಲದೆಂಬಂತೆ ನಿದ್ರೆಯಲ್ಲಿ ಯಾವಾಗಲೂ ಕೆಟ್ಟ ಕನಸುಗಳು ಬಿದ್ದು ನಿದ್ದೆಯನ್ನು ಹಾಳುಮಾಡುತ್ತಿವೆ. ವಾಸ್ತು ಶಾಸ್ತ್ರದಲ್ಲಿ ಇವೆಲ್ಲಕ್ಕೂ ಪರಿಹಾರಗಳಿವೆ. ಆ ಪರಿಹಾರಗಳು ಯಾವುವೆಂದು ತಿಳಿದುಕೊಳ್ಳೊಣ.
1.ಸ್ಪಟಿಕ :-
ನಿದ್ದೆಮಾಡುವಾಗ ಒಂದು ತುಂಡು ಸ್ಪಟಿಕ ( 0) ವನ್ನು ತಲೆ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ಕೆಟ್ಟ ಕನಸುಗಳು ಬೀಳುವುದಿಲ್ಲ.
ಪಾಸಿಟಿವ್ ಎನರ್ಜಿ ದೇಹದೊಳಗೆ ಪ್ರವೇಶಿಸುತ್ತದೆ. ಹಲವು ರೀತಿಯ ತೊಂದರೆಗಳು ದೂರವಾಗುತ್ತವೆ. ದುಷ್ಟಶಕ್ತಿಗಳಿಂದ ಮುಕ್ತಿ ದೊರೆಯುತ್ತದೆ.
2.ಸೋಂಪು :-
ತಲೆದಿಂಬಿನ ಕೆಳಗೆ ಸೋಂಪು ಕಾಳುಗಳನ್ನು ಇಟ್ಟುಕೊಂಡು ಮಲಗುವುದರಿಂದ ನೆಗೆಟಿವೆ ಎನರ್ಜಿ ದೂರವಾಗುತ್ತದೆ. ಚೆನ್ನಾಗಿ ನಿದ್ರೆ ಬರುತ್ತದೆ.
ನೀದ್ರಾ ಹೀನತೆ ದೂರವಾಗುತ್ತದೆ. ವಾಸ್ತು ದೋಷವಿದ್ದಲ್ಲಿ ಅದೂ ಸಹ ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:-
ನಿಮಗೆ ಕಣ್ಣ್ ತುಂಬಾ ನಿದ್ದೆ ಬರಬೇಕೆ. ಹಾಗಾದರೆ, ತಲೆದಿಂಬಿನ ಕೆಳಗೆ 3,4 ಬೆಳ್ಳುಳ್ಳಿ ಹಿಳುಕುಗಳನ್ನು ಇಟ್ಟುಕೊಂಡು ಮಲಗಿ.
ಹೀಗೆ ಮಾಡುವುದರಿಂದ ಮಿದುಳಿಗೆ ವಿಶ್ರಾಂತಿ ದೊರೆತು ನಿದ್ರಾಹೀನತೆ ದೂರವಾಗುತ್ತದೆ. ನಿಮ್ಮ ದೇಹದೊಳಕ್ಕೆ ಪಾಸಿಟಿವ್ ಎನರ್ಜಿ ಪ್ರವೇಶವಾಗುತ್ತದೆ.
4.ಮಲಗುವ ದಿಕ್ಕು :-
ನಿದ್ದೆಯಲ್ಲಿ ಕನಸುಗಳು ಬೀಳದಿರಲು ಹಾಗೂ ನಿದ್ರಾಹೀನತೆಯನ್ನು ದೂರ ಮಾಡುವಲ್ಲಿ ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎನ್ನು ವುದು ಮುಖ್ಯ ಪಾತ್ರ ವಹಿಸುತ್ತದೆ.
ಕಾಲುಗಳನ್ನು ಉತ್ತರ ದಿಕ್ಕಿಗೆ, ತಲೆಯ ದಕ್ಷಿಣ ದಿಕ್ಕಿಗೆ ಇರುವಂತೆ ಮಲಗಿ ನೋಡಿ, ಯಾವುದೇ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖ ನಿದ್ರೆ ನಿಮ್ಮದಾಗುತ್ತದೆ.
5.ತಲೆ ದಿಂಬು:-
ಶುಭ್ರವಾದ, ಮೆತ್ತಗಿರುವ ದಿಂಬನ್ನು ತಲೆಕೆಳಗೆ ಇಟ್ಟುಕೊಂಡು ಮಲಗುವುದರಿಂದ ದೇಹದೊಳಗೆ ಪಾಸಿಟಿವ್ ಎನರ್ಜಿ ಪ್ರವೇಶಿಸಿ ಚೆನ್ನಾಗಿ ನಿದ್ದೆ ಬರುತ್ತದೆ.
6.ಮ್ಯಾಜಿಕ್ ಮಿಶ್ರಣ :-
ಮಲಗುವ ಮುಂಚೆ ,ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಕರ್ಪೂರವನ್ನು ಬೆರೆಸಿ, ಈ ಮಿಶ್ರಣವನ್ನು ಹಿಮ್ಮಡಿಗಳಿಗೆ ಹಚ್ಚಿ ನಿದ್ರಿಸಿದರೆ, ಚೆನ್ನಾಗಿ ನಿದ್ದೆ ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?