ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.
ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.
ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.
ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ? ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.
ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.
ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.
ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.
ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.
ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…