ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?
ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .
ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .
ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.