ಜ್ಯೋತಿಷ್ಯ

ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

548

ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ವೃಷಭ:-

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

 

ಮಿಥುನ:

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ಕಟಕ :-

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

 

 

 ಸಿಂಹ:

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫ‌ಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ಕನ್ಯಾ :-

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ತುಲಾ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ವೃಶ್ಚಿಕ :-

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

 

ಧನಸ್ಸು:

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಮಕರ :-

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕುಂಭ:-

ಕಟ್ಟಡ-ಮನೆ ಮಾರಾಟ, ಫ್ಲಾಟ್‌ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಮೀನ:-

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸ‌ಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…