ಜೀವನಶೈಲಿ

ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

476

ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.

ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.

ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.

ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.

ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.

ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.

ತಕ್ಷಣದ ಪರಿಹಾರ:-

ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.

ಮೂಲ :

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • ಕಾನೂನು

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಮಾಡಿರುವ ಯೋಜನೆ ‘ಸುಕನ್ಯಾ ಸಮೃದ್ಧಿ’ …!ತಿಳಿಯಲು ಈ ಲೇಖನ ಓದಿ ..

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….