Health

ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

56

ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.


ಆರೋಗ್ಯವೃದ್ಧಿ

ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್‌ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್‌, ಅರ್ಥರೈಟಿಸ್‌ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್‌ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್‌ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.



ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್‌ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.

ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ


ಕಾಂತಿ ಹೆಚ್ಚಳ

ವಿಟಮಿನ್‌ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್‌ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್‌.

ಮೆದುಳು ಚುರುಕು

ಇದರಲ್ಲಿರುವ ವಿಟಮಿನ್‌ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್‌ ಸೇವಿಸಬಹುದು.


ನೆಗಡಿ ನಿವಾರಕ

ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ

ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.


ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ

souce : internet


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…

  • ವಿಚಿತ್ರ ಆದರೂ ಸತ್ಯ

    ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

    ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…