ಸುದ್ದಿ

ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

50

ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​.

ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ.

‘ಕೋಟಿಗೊಬ್ಬ-3’ ಸಿನಿಮಾದ ಚಿತ್ರೀಕರಣಕ್ಕೆ ಪೋಲೆಂಡ್​​ಗೆ ತೆರಳಿರುವ ನಟ ಸುದೀಪ್ ಮತ್ತು ಚಿತ್ರತಂಡ ಅಲ್ಲಿನ ರಾಯಭಾರಿ ಕಚೇರಿಗೆ ಭೇಟಿ ನೀಡಿದೆ. ನಟ ಸುದೀಪ್ ಅವರು ಪೋಲೆಂಡ್​​ನ ರಾಯಭಾರಿ ಅಧಿಕಾರಿಯ ಜೊತೆಗಿರುವ ಫೋಟೋವನ್ನು ಟ್ವೀಟ್ಟರ್​​​ನಲ್ಲಿ ಟ್ವೀಟ್ಟಿಸಿದ್ದಾರೆ. ಜೊತೆಗೆ ಅಲ್ಲಿನ ಅನಿವಾಸಿ ಭಾರತಿಯರನ್ನು ಕಂಡು ಖುಷ್ ಆಗಿದ್ದಾರೆ. ಆ ಫೋಟೋಗಳನ್ನು ಕೂಡ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ ರನ್ನ.

‘ಕೋಟಿಗೊಬ್ಬ-3’ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್. ಅದ್ಧೂರಿ ಚೇಸಿಂಗ್ ದೃಶ್ಯಗಳನ್ನು ಪೋಲೆಂಡ್ ದೇಶದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಮೊದಲು ‘ಕೋಟಿಗೊಬ್ಬ-3’ ಚಿತ್ರದ ಚೇಸಿಂಗ್​​ ದೃಶ್ಯದ ಕೆಲ ಭಾಗವನ್ನು ಈಗಾಗಲೇ ಚಿತ್ರೀಕರಿಸಲಾಗಿದೆ. ಈಗ ಅದರ ಮುಂದುವರೆದ ಭಾಗವನ್ನು ಪೋಲೆಂಡ್ನಲ್ಲಿ ಶೂಟ್​ ಮಾಡಲಾಗುತ್ತಿದೆ. ಚಿತ್ರವನ್ನು ಶಿವಕಾರ್ತಿಕ್ ನಿರ್ದೇಶನ ಮಾಡಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ