ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.
ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.
ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-
ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.
ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.
ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-
ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.
ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.
ಬೀಟ್ರೂಟ್ ಜ್ಯೂಸ್:-
ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.
ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ
ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-
ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.
ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.
ಬೀಟ್ರೂಟ್ ಫ್ರೈ:-
ಬೀಟ್ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.
ಅದನ್ನು ಬೀಟ್ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ
ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-
ಬೀಟ್ರೂಟ್ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).
ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್ರೂಟ್ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.