ಸುದ್ದಿ

ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

1163

2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.

ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.

45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್‍ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.

ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್‍ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್‍ಗೆ 9 ವರ್ಷ.

ಎಸ್‍ಎಸ್‍ಎಲ್‍ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್‍ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್‍ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್‍ನ ತಮ್ಮ ಸಲೂನ್‍ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್‍ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.

ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.

ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಸುದ್ದಿ

    BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…