ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….
ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.
ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.
ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.
ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.
ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.
ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.
ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.
ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.
ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.
ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.
ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…