ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…