ಆಧ್ಯಾತ್ಮ

ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

2174

ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.

ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.

ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…

ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ  ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.

ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.

ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.

ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.

ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.

ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.

ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ