ಉಪಯುಕ್ತ ಮಾಹಿತಿ

ರಾಜ್ಯಸರ್ಕಾರದಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ “ಮಾತೃಪೂರ್ಣ”ಯೋಜನೆ ಬಾಗ್ಯ!ಇದರ ಬಗ್ಗೆ ನೀವೂ ತಿಳಿಯಿರಿ ಮತ್ತು ನಿಮ್ಮವರಿಗೆ ಶೇರ್ ಮಾಡಿ ತಿಳಿಸಿ…

1336

ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.

ಏನಿದು ಮಾತೃಪೂರ್ಣ ಯೋಜನೆ ?

ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ ಈ ಯೋಜನೆಯಡಿ,  ನೊಂದಾಯಿತ ಎಲ್ಲಾ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ದಿನದಂತೆ ವರ್ಷದಲ್ಲಿ 3೦೦ ದಿನ ನಿತ್ಯ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಉಚಿತ ಪೌಷ್ಟಿಕಾಂಶಯುಕ್ತ ಬಿಸಿಯೂಟ ವಿತರಿಸಲಾಗುತ್ತದೆ.

ಮಾತೃಪೂರ್ಣ ಯೋಜನೆಯಲ್ಲಿ ಏನೆಲ್ಲಾ ವಿತರಿಸಲಾಗುತ್ತದೆ…

ಈ ಯೋಜನೆಯಡಿ ನೀಡಲಾಗುವ ಬಿಸಿಯೂಟದಲ್ಲಿ ಅನ್ನ, ಸಾಂಬಾರ್, ಬೇಯಿಸಿದ ಮೊಟ್ಟೆ, ಪಲ್ಯ, 200 ಮಿಲಿ ಹಾಲು, ಶೇಂಗಾ ಚಿಕ್ಕಿ (ಮಿಠಾಯಿ) ಸೇರಿರುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆ ಕಾಳು ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ  ದಿನಕ್ಕೆ ಅಗತ್ಯವಿರುವ ಶೇ 4೦ ರಿಂದ 45 ರಷ್ಟು ಪ್ರೋಟೀನ್, ಕ್ಯಾಲರಿ ಮತ್ತು ಕ್ಯಾಲ್ಸಿಯಂ ಈ ಒಂದು ಹೊತ್ತಿನ ಊಟದಿಂದ ದೊರಕುತ್ತದೆ. ಜೊತೆಗೆ ಕಬ್ಬಿಣಾಂಶಯುಕ್ತ ಮಾತ್ರೆಯನ್ನು ನೀಡಲಾಗುತ್ತಿದ್ದು, ಊಟವಾದ ಬಳಿಕ ಕಡ್ಡಾಯವಾಗಿ ಸೇವಿಸುವಂತೆ ಸೂಚಿಸಲಾಗುತ್ತದೆ.

ಮೂರು ತಿಂಗಳು ತುಂಬಿದ ಗರ್ಭಿಣಿಯರಿಂದ ಮಗು ಜನಿಸಿದ ನಂತರ ಬಾಣಂತಿ ಅವಧಿಯ 6 ತಿಂಗಳವರೆಗೆ ಉಚಿತ ಪೌಷ್ಟಿಕ ಆಹಾರ ಒದಗಿಸಲಾಗುತ್ತದೆ. ಅಂದರೆ ಒಟ್ಟು 12 ತಿಂಗಳು ಉಚಿತ ಊಟ ನೀಡಲಾಗುತ್ತದೆ. ಹೆಸರು ನೊಂದಾಯಿಸಿ ಗರ್ಭಿಣಿಯರು 3ನೇ ತಿಂಗಳಿನಿಂದ 8ನೇ ತಿಂಗಳ ಅಂತ್ಯದವರೆಗೂ ಅಂಗನವಾಡಿ ಕೇಂದ್ರಕ್ಕೆ ಬಂದು ಆಹಾರ ಸೇವಿಸಬೇಕು. 9ನೇ ತಿಂಗಳಿನಿಂದ ಬಾಣಂತಿ ಅವಧಿಯ 45 ದಿನದವರೆಗೂ ಸಹಾಯಕಿಯರು ಮನೆ ಬಾಗಿಲಿಗೆ ಊಟದ ಡಬ್ಬಿ ತಲುಪಿಸುತ್ತಾರೆ. ಉಳಿದ 41/2 ತಿಂಗಳು ಬಾಣಂತಿಯರು ಕೇಂದ್ರಕ್ಕೆ ಬರಬೇಕಾಗುತ್ತದೆ.

ಗರ್ಭಿಣಿಯರ ನೊಂದಣಿಯಿಂದ ಅವರಿಗೆ ಪ್ರಸವಪೂರ್ವ ಆರೈಕೆ ಸೇವೆಗಳು ದೊರಕುತ್ತದೆ. ಇಲ್ಲಿ ಹೆರಿಗೆಯ ಅನುಭವ ಹೊಂದಿರುವವರು ಮತ್ತು ಅನುಭವಿಗಳು ಒಂದೆಡೆ ಸೇರುವುದರಿಂದ ಅನುಭವ ಹಂಚಿಕೆ ಸಾಧ್ಯವಾಗುತ್ತದೆ. ಈ ವೇಳೆ ಅವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತದೆ. ಸ್ತನ್ಯ ಪಾನದ ಮಹತ್ವ, ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳುವುದು, ನಿಯಮಿತ ವೈದ್ಯಕೀಯ ತಪಾಸಣೆ, ವಿಶ್ರಾಂತಿ ಮುಂತಾದ ಅಗತ್ಯ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಗರ್ಭಿಣಿಯರು ಇರುವ ಮನೆಗೆ ಅಕ್ಕಿ, ಗೋಧಿ ಮುಂತಾದ ಧಾನ್ಯ ಪದಾರ್ಥಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…

  • ಉಪಯುಕ್ತ ಮಾಹಿತಿ

    ನಿಮ್ಗೆ ಭೂಮಿಯ ಬಗ್ಗೆ ಗೊತ್ತಿರದ ಈ 5 ವಿಸ್ಮಯ ಸಂಗತಿಗಳು!ಗೊತ್ತಾಗ್ಬೇಕೆಂದ್ರೆ ಈ ಲೇಖನಿ ಓದಿ ಶೇರ್ ಮಾಡಿ….

    ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…