ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…