ಜ್ಯೋತಿಷ್ಯ

ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

744

ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ವೃಷಭ:-

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

 

ಮಿಥುನ:

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಕಟಕ :-

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

 

 ಸಿಂಹ:

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ಕನ್ಯಾ :-

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ತುಲಾ:

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ವೃಶ್ಚಿಕ :-

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಧನಸ್ಸು:

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಮಕರ :-

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ಕುಂಭ:-

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಮೀನ:-

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…