ಉದ್ಯೋಗ

ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

183

ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್.

ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ.

ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ.

ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

ಇದು ಇವನೊಬ್ಬನ ಕಥೆಯಲ್ಲ. ಭಾರತದ ಐಟಿ ಉದ್ಯಮದಲ್ಲಿ ಸುಮಾರು 13,000 ಕಂಪನಿಗಳಲ್ಲಿ ದುಡಿಯುವ 28 ಲಕ್ಷ ಟೆಕ್ಕಿಗಳು ನೇರವಾಗಿ ಮತ್ತು ಇದರ ಮೂಲಕ ಪರೋಕ್ಷವಾಗಿ ಕೆಲಸ ಮಾಡುವ 89 ಲಕ್ಷ ಜನರು ಎದುರಿಸುತ್ತಿರುವ ಭಯ, ಆತಂಕ.

ಬೆಂಗಳೂರು ನಗರವೊಂದರಲ್ಲೇ ಸುಮಾರು 5,000 ಟೆಕ್ ಕಂಪನಿಗಳಿವೆ. ಇತ್ತೀಚೆಗಿನ ದಿನಗಳಲ್ಲಿ ಇನ್ ಫೋಸಿಸ್, ವಿಪ್ರೋ, ಟೆಕ್ ಮಹೀಂದ್ರ, ಕಾಗ್ನಿಜೆಂಟ್ ಮತ್ತು ಐಬಿಎಂನಂಥ ಕಂಪನಿಗಳು ಸುಮಾರು 58,000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿವೆ ಎಂದು ಹೇಳಲಾಗುತ್ತಿದ್ದು, ಈ ಹಾದಿಯಲ್ಲಿ ಇನ್ನೂ ಕೆಲವು ಕಂಪನಿಗಳು ಇವೆಯಂತೆ.

ಹಾಗೆಯೇ ಈ ದೊಡ್ಡ ಕಂಪನಿಗಳ ಹಾದಿಯಲ್ಲಿಯೇ ಸಣ್ಣ ಸಣ್ಣ ಕಂಪನಿಗಳು ಇನ್ನೂ ದೂರ ಸಾಗಿದರೆ ಆಶ್ಚರ್ಯವಿಲ್ಲ.

ಈ ಕಂಪನಿಗಳ ಪ್ರಕಾರ ಇದು ಸಾಧಿಸಿದವರನ್ನು ಉಳಿಸಿಕೊಳ್ಳುವ ಮತ್ತು ಸಾಧಿಸದವರನ್ನು ಕೆಲಸದಿಂದ ತೆಗೆದು ಹಾಕುವ ವಾರ್ಷಿಕ ಪ್ರಕ್ರಿಯೆಯಷ್ಟೆ. ಇದು ಸಿಬ್ಬಂದಿ ವೇತನದ ಬಿಲ್‌ನ್ನು ಕಡಿಮೆ ಮಾಡುವ ಮತ್ತು ನಿರ್ವಹಣಾ ವೆಚ್ಚವನ್ನು ತಗ್ಗಿಸಲು shifting to automation, robotic, manning legacy system to digital and cloud  ಎನ್ನುವ ಸತ್ಯವನ್ನು ಮರೆಮಾಚಲಾಗುತ್ತದೆ ಎಂದು ಸಾಫ್ಟವೇರ್ ತಜ್ಞರು ಅಭಿಪ್ರಾಯ ಪಡುತ್ತಾರೆ.

ಟೆಕ್ಕಿಗಳ ಉದ್ಯೋಗ ಉಳಿಯಬೇಕಾದರೆ ಅವರು ತಮ್ಮ ತಾಂತ್ರಿಕ ಕೌಶಲ ಮತ್ತು ವಿದ್ಯಾರ್ಹತೆಯನ್ನು ಹೆಚ್ಚಿಸಿಕೊಬೇಕಾದ ಅನಿವಾರ್ಯ ಉಂಟಾಗಿದೆ.

ಸಾಫ್ಟ್‌ವೇರ್ ಉದ್ಯಮದಲ್ಲಿನ ಕಳೆದ ಒಂದೆರಡು ವರ್ಷಗಳ ಆಗುಹೋಗುಗಳನ್ನು ಮತ್ತು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಇಂಥ ಪರಿಸ್ಥಿತಿಯ ಆಗಮನದ ಸಂಕೇತ ಮತ್ತು ಸೂಚನೆಗಳು ಎದ್ದು ಕಾಣುತ್ತಿದ್ದವು ಮತ್ತು ಅದನ್ನು ಗೋಡೆಯ ಮೇಲೆ ನಿಚ್ಚಳವಾಗಿ ಬರೆಯಲಾಗಿತ್ತು ಕೂಡಾ.

ಆದರೆ, ವ್ಯಾಧಿ ಪಸರಿಸಿ ಹತೋಟಿ ತಪ್ಪುವ ಹಂತಕ್ಕೆ ಬಂದಾಗ ಮಾತ್ರ ಎಚ್ಚೆತ್ತುಕೊಳ್ಳುವ ನಮ್ಮ ಮನೋಸ್ಥಿತಿಗೆ ಇದು ಬೇಗ ಅರ್ಥವಾಗಲಿಲ್ಲವಷ್ಟೆ. ಉದ್ಯೋಗಿಗಳು ಕೂಡ ಸ್ವಲ್ಪ ನಿರ್ಲಿಪ್ತತೆ ತೋರಿಸಿದರು.

ಐಟಿ ಕ್ಷೇತ್ರದ ಮಾಜಿ ದಿಗ್ಗಜರೊಬ್ಬರ ಪ್ರಕಾರ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಅಡಿಯಿಡುತ್ತಿರುವ ಅಟೋಮೇಷನ್ ವ್ಯವಸ್ಥೆ, ಭಾರತದಲ್ಲಿ ಇನ್ನು 9 ವರ್ಷಗಳಲ್ಲಿ 20 ಕೋಟಿ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡುವ ಸಾಧ್ಯತೆ ಇದೆ.

ಸುಮಾರು 2ರಿಂದ 2.50 ಲಕ್ಷ ಹೆಚ್ಚುವರಿ ಉದ್ಯೋಗಗಳು ಬೆಳಕು ಕಾಣುವ ಸಾಧ್ಯತೆ ಕಡಿಮೆ. ಹಾಗೆಯೇ 2.25 ಲಕ್ಷ ಮಧ್ಯಮ ದರ್ಜೆ ಉದ್ಯೋಗಗಳು ಕಡಿಮೆಯಾಗಬಹುದು. ವಿಶೇಷ ತಂತ್ರಜ್ಞಾನ ಇದ್ದವರು ಮಾತ್ರ ಉಳಿಯಬಲ್ಲರು.

ಈಗಿನಂತೆ ಕೇವಲ ಒಂದು ಎಂಜಿನಿಯರಿಂಗ್ ಪದವಿ ಉದ್ಯೋಗ ಕೊಡಲಾರದು. ವಿಶ್ವ ಬ್ಯಾಂಕಿನ ಒಂದು ವರದಿ ಪ್ರಕಾರ ಸಾಫ್ಟ್ ವೇರ್ ಉದ್ಯಮದ ಈ ಹೊಸ ಆವಿಷ್ಕಾರ ಭಾರತದಲ್ಲಿ 69% ಉದ್ಯೋಗಿಗಳನ್ನು ಎತ್ತಂಗಡಿ ಮಾಡುವ ಸಾಧ್ಯತೆ ಇದೆ.

ಬರಗಾಲದಲ್ಲಿ ಅಧಿಕ ಮಾಸ ಅಥವಾ ಗಾಯದ ಮೇಲೆ ಬರೆ ಎನ್ನುವಂತೆ ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಚ್1ಬಿ ವೀಸಾ ಹೆಸರಿನಲ್ಲಿ ಭಾರತದ ಸಾಫ್ಟ್ ವೇರ್ ಉದ್ಯಮವನ್ನು ಹಳಿ ತಪ್ಪಿಸುತ್ತಿದ್ದಾರೆ.

ಈ ವರದಿಯ ಪ್ರಕಾರ ತಂತ್ರಜ್ಞಾನ ವಲಯದಲ್ಲಿ ಅಟೋಮೇಷನ್ ನುಸುಳುವುದರಿಂದ ಮುಂದಿನ 5 ವರ್ಷಗಳಲ್ಲಿ 5 ರಿಂದ 6.50 ಲಕ್ಷ ಟೆಕ್ಕಿಗಳು ನಿರುದ್ಯೋಗಿಗಳಾಗುವ ಸಂಭವ ಇದೆ.

2021ರ ಹೊತ್ತಿಗೆ ತಂತ್ರಜ್ಞಾನ ವಲಯದಲ್ಲಿ ಸುಮಾರು 9% ಅಥವಾ 14 ಲಕ್ಷ ಉದ್ಯೋಗ ಕಡಿತವಾಗಲಿದೆ. ಇದು ನಿಜವಾದರೆ, ದೇಶದ ಹತ್ತು ಲಕ್ಷ ಕೋಟಿ ಮೌಲ್ಯದ ಉದ್ಯಮಕ್ಕೆ ಆಘಾತಕಾರಿ ಅಥವಾ ಮಾರಣಾಂತಿಕ ಪೆಟ್ಟು ಬೀಳಲಿದೆ ಎನ್ನಬಹುದು.

ಕೆಲವು ಮೂಲಗಳ ಪ್ರಕಾರ ಆರಂಭದಲ್ಲಿ ಈ ಅಟೋಮೇಷನ್ ಆವಿಷ್ಕಾರ 37 ಲಕ್ಷ ಉದ್ಯೋಗಿಗಳನ್ನು ಹೊಂದಿದ ಬಿಪಿಓ ವಲಯವನ್ನು ಹೆಚ್ಚು ಸಂಕಷ್ಟಕ್ಕೆ ದೂಡಬಹುದು.

ಹಾಗೆಯೇ ಮಧ್ಯಮ ಕೌಶಲದ 8% ಉದ್ಯೋಗಗಳನ್ನು ಮತ್ತು ಕಡಿಮೆ ಕೌಶಲದ 30% ಉದ್ಯೋಗಗಳನ್ನು ಕಡಿತಗೊಳಿಸಬಹುದು ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಇವರ ಪ್ರಕಾರ 30-50 ಲಕ್ಷ ಸಂಬಳ ದುಡಿಯುವ 50% ಮ್ಯಾನೇಜರ್‌ಗಳು ಪ್ರತಿವರ್ಷ ಉದ್ಯೋಗ ಕಳೆದು ಕೊಳ್ಳಬಹುದು. ಆರಂಭಿಕ ಹಂತದ ನೇಮಕದಲ್ಲಿ 10-12% ಕಡಿಮೆಯಾಗುವ ಸಾಧ್ಯತೆ ಇದೆ. ಪ್ರತಿವರ್ಷ ಕಾಲೇಜುಗಳು 15 ಲಕ್ಷ ಎಂಜಿನಿಯರ್‌ಗಳನ್ನು ಕಳಿಸುತ್ತಿದ್ದು, ಉದ್ಯೋಗ ಲಭ್ಯತೆ ಕೇವಲ 2ರಿಂದ 2.25 ಲಕ್ಷ ಎಂದು ಹೇಳಲಾಗುತ್ತಿದೆ.

ಯಾವುದು ಸತ್ಯ?

ವಿಪರ್ಯಾಸವೆಂದರೆ ಪಿಂಕ್ ಸ್ಲಿಪ್ ಭಯದಲ್ಲಿ ಐಟಿ ಸೆಕ್ಟರ್ ತಳಮಳಗೊಳ್ಳುತ್ತಿರುವಾಗ ಟೆಕ್ ಕಂಪನಿಗಳ ಮಹಾ ಸಂಘ (Nasscom)  ಅಧ್ಯಕ್ಷ ಆರ್. ಚಂದ್ರಶೇಖರ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದು, 2017ರಲ್ಲಿ ಟೆಕ್ ಕಂಪನಿಗಳು 1.70 ಲಕ್ಷ ನೇಮಕ ಮಾಡಿದ್ದು, ಮಾರ್ಚ್ 2017ರ ತ್ರೈಮಾಸಿಕದಲ್ಲಿಯೇ 50,000 ನೇಮಕ ಮಾಡಿವೆಯಂತೆ.

2025ರ ಹೊತ್ತಿಗೆ ಐಟಿ ಸೆಕ್ಟರ್‌ನಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗುವ ಆಶಾಭಾವನೆಯನ್ನು ಅವರು ವ್ಯಕ್ತ ಪಡಿಸಿದ್ದಾರೆ. ಈ ಹೇಳಿಕೆಗೆ ಪುಷ್ಟಿ ಕೊಡುವಂತೆ ಟೆಕ್ ಕಂಪನಿಗಳ ಹಿರಿಯಣ್ಣ ಇನ್‌ಫೋಸಿಸ್ 2017ರಲ್ಲಿ 20,000 ನೇಮಕ ಮಾಡುವುದಾಗಿ ಹೇಳಿದೆ.

ಇದು ಸತ್ಯವೋ ಅಥವಾ ಮಿಥ್ಯವೋ ಎನ್ನುವುದನ್ನು ಮುಂದಿನ ದಿನಗಳಲ್ಲಿ ನೋಡಬೇಕು. ಐಟಿ ಕಂಪನಿಗಳಲ್ಲಿ ಉಂಟಾದ ಪಿಂಕ್ ಸ್ಲಿಪ್ ತಳಮಳದ ದಾವಾಗ್ನಿಯನ್ನು ತಣ್ಣಗಾಗಿಸುವ ಪ್ರಯತ್ನ ಇದು ಎಂದು ವಿಶ್ಲೇಷಕರು ಭಾಷ್ಯ ಬರೆಯುತ್ತಿದ್ದಾರೆ.

ಸಾಫ್ಟವೇರ್ ಕ್ಷೇತ್ರದ ಇಂದಿನ ತಳಮಳವನ್ನು ಕಂಪನಿಗಳ ಸ್ವಯಂಕೃತ ಅಪರಾಧ ಎಂದು ಧಾರಾಳವಾಗಿ ಹೇಳಬಹುದು. ತನ್ನ ಸಿಬ್ಬಂದಿಯ ವೇತನ, ಸೌಲಭ್ಯವನ್ನು ನಿಗದಿ ಮಾಡುವಾಗ ಅದು ಇನ್ನಿತರ ರಂಗಗಳಲ್ಲಿಯ ವೇತನ ಸೌಲಭ್ಯವನ್ನು ಪರಿಗಣನೆಗೆ ತೆಗೆದುಕೊಂಡಂತೆ ಕಾಣುವುದಿಲ್ಲ.

ಜಗತ್ತಿನಲ್ಲಿ ಯಾರೂ ಮಾಡದ, ತೋರದ ಕೆಲಸ ಮತ್ತು ನೈಪುಣ್ಯವನ್ನು ಟೆಕ್ಕಿಗಳು ಮಾಡುತ್ತಾರೆ ಎನ್ನುವ ಭ್ರಮಾಲೋಕವನ್ನು ಸೃಷ್ಟಿಸಲಾಯಿತು ಮತ್ತು ಆರಂಭದ ಹಂತದಲ್ಲಿಯೇ ಐದಂಕಿ ವೇತನ ನೀಡಲಾಯಿತು. ಮುಂಬರಲಿರುವ ಪರಿಣಾಮವನ್ನು ಯಾರೂ ಯೋಚಿಸುವ ಪ್ರಯತ್ನ ಮಾಡಲಿಲ್ಲ. ಟೆಕ್ಕಿಗಳು ಕೂಡ ಇಂಥ ಒಳ್ಳೆಯ ಪರಿಸ್ಥಿತಿಯೇ ಯಾವಾಗಲೂ ಇರುತ್ತದೆ ಎಂದು ಬಲವಾಗಿ ನಂಬಿದ್ದರು.

ಬದಲಾವಣೆಯ ಸಾಧ್ಯತೆಯನ್ನು ಎಂದೂ ಚಿಂತಿಸಲಿಲ್ಲ. ಆರಂಭದ ದಿನಗಳಲ್ಲಿ ಸಾಫ್ಟ್‌ವೇರ್ ಬಿಜಿನೆಸ್‌ನಲ್ಲಿ ಪೂರೈಕೆ ಕಡಿಮೆ ಇದ್ದು, ಬೇಡಿಕೆ ಹೆಚ್ಚಾಗಿತ್ತು. ಹಾಗೆಯೇ ವ್ಯವಹಾರದಲ್ಲಿ ಬೇರೆ ಉದ್ಯಮದವರು ಹೊಟ್ಟೆ ಕಿಚ್ಚು ಪಡುವಷ್ಟು ಮಾರ್ಜಿನ್ ಕೂಡಾ ಇತ್ತು.

ದಿನಗಳು ಕಳೆದಂತೆ ಪೂರೈಸುವ ಕಂಪನಿಗಳು ನಾಯಿಕೊಡೆಗಳಂತೆ ಹೆಚ್ಚಿ, ಬೇಡಿಕೆ ಕಡಿಮೆಯಾಗಿ ಮಾರ್ಜಿನ್ ಕಡಿಮೆಯಾಯಿತು. ಅದೇ ರೀತಿ ನಿರ್ವಹಣಾ ವೆಚ್ಚ ಕಡಿಮೆಯಾಗಲಿಲ್ಲ.

ಒಂದು ಟೆಕ್ ಕಂಪನಿಯ ಮುಖ್ಯಸ್ಥನ ವಾರ್ಷಿಕ ಸಂಬಳ 67 ಕೋಟಿ ಎಂದರೆ, ಬಹುತೇಕ ಟೆಕ್ಕಿಗಳ ಸಂಬಳದ ಗಾತ್ರದ ಪರಿಚಯವಾಗಬಹುದು. ಈ ಸಂಬಳ ಸೌಲಭ್ಯಗಳಿಗೆ ಜೀವನ ಚಕ್ರವನ್ನು ಹೊಂದಿಸಿಕೊಂಡವರು, ಎಲ್ಲೂ ಕೆಲಸ ಪಡೆಯದೆ, ಅಥವಾ ಕಡಿಮೆ ಸಂಬಳಕ್ಕೆ ಒಪ್ಪಿಕೊಳ್ಳದೆ ಜೀವನ ರಥ ಓಡಿಸಬಹುದೇ ಎನ್ನುವುದು ಮುಖ್ಯಪ್ರಶ್ನೆ. ಇದೇ ಅವರ ದುಃಸ್ವಪ್ನದ ಹಿಂದಿನ ವ್ಯಾಕುಲತೆ.

ಕೆಲವರಿಗೆ ಪಿಂಕ್ ಸ್ಲಿಪ್ ಕೊಡಲು ಸಿಬ್ಬಂದಿಯ ಪಟ್ಟಿ ತಯಾರಿಸುವಂತೆ ಕಂಪನಿಯೊಂದರ ಮುಖ್ಯಸ್ಥರು ಮಾನವ ಸಂಪನ್ಮೂಲ ಅಧಿಕಾರಿ (ಎಚ್‌ಆರ್)ಗೆ ಹೇಳಿದಾಗ, ಯಾರನ್ನು ಮನೆಗೆ ಕಳಿಸುವುದು ಎಂದು ಸುಲಭಕ್ಕೆ ನಿರ್ಣಯಿಸಲಾಗದೆ ವಾರಗಟ್ಟಲೆ ಸಂದಿಗ್ಧದಲ್ಲಿ ಒದ್ದಾಡಿದ್ದರಂತೆ. ಒಬ್ಬರ ಅನ್ನ ಕಸಿಯುವಾಗ ಅನುಭವಿಸುವ ಪಾಪ ಪ್ರಜ್ಞೆ ಊಹೆಗೆ ನಿಲುಕದ್ದು!

ಗಣಕೀಕರಣ ಅಥವಾ ಸಾಫ್ಟವೇರ್ ಮೂಲಕ ಬ್ಯಾಂಕ್, ವಿಮಾ, ರೈಲ್ವೆ ಹೀಗೆ ಸಾವಿರಾರು ಇಲಾಖೆಗಳಲ್ಲಿ ಕೋಟ್ಯಂತರ ಉದ್ಯೋಗಿಗಳ ಬದುಕಿನ ಆಸರೆಯನ್ನು ಕಸಿದುಕೊಂಡ ಸಾಫ್ಟವೇರ್ ಉಧ್ಯಮ ಅದೇ ತಂತ್ರಜ್ಞಾನಕ್ಕೇ ಬಲಿಯಾಗುತ್ತಿರುವದು, ಆಧುನಿಕ ಜಗತ್ತಿನ ಒಂದು ಮಹಾ ವಿಪರ್ಯಾಸ ಎನ್ನಬಹುದು.

ಹಾಗೆಯೇ ತಮ್ಮ ಬೇಡಿಕೆಗಳಿಗೆ, ವೇತನ ಹೆಚ್ಚಳಕ್ಕೆ, ಸೌಲಭ್ಯಗಳಿಗೆ ಮತ್ತು ಉದ್ಯೋಗ ಸ್ಥಿರತೆಗಾಗಿ ಸದಾ ತಮ್ಮ ಕಾರ್ಯಾಲಯದ ದ್ವಾರದ ಮುಂದೆ ಕೆಂಪು ಬಾವುಟದಡಿಯಲ್ಲಿ ಮುಷ್ಟಿ ಎತ್ತಿ, ಕುತ್ತಿಗೆ ನರ ಉಬ್ಬಿಸಿ ಘೋಷಣೆ ಕೂಗುವ ದುಡಿಯುವ ವರ್ಗವನ್ನು ಆಶ್ಚರ್ಯದಿಂದ ನೋಡುತ್ತಿದ್ದ ಟೆಕ್ಕಿಗಳು ಮುಂದಿನ ದಿನಗಳಲ್ಲಿ ಅವರಿಗೆ ಕೈ ಜೋಡಿಸುವ ಮತ್ತು ಅವರೊಂದಿಗೆ ಧ್ವನಿಗೂಡಿಸುವ ಕಾಲ ಬಂದಿದ್ದು ಇನ್ನೊಂದು ವಿಪರ್ಯಾಸ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…