ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…
ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.
ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.
ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.
ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.
ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.
ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.
ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.
ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.
ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.
ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.
2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…