ಆಧ್ಯಾತ್ಮ

ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

4007

ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…

ಸಾವಿನ ಬಳಿಕ ಮುಂಡನ ಮಾಡುವುದು ಯಾಕೆ?

ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.

ಶೋಕದ ಸಂಕೇತ

ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಪ್ರತೀಕಾರದ ಸಿದ್ಧಾಂತ ಬಿಡುವುದು

ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.

ಧನಾತ್ಮಕ ಶಕ್ತಿ

ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.

ಬೇರ್ಪಡುವಿಕೆ ಮತ್ತು ವೈರಾಗ್ಯ ಹೆಚ್ಚಿಸುವುದು

ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಶುದ್ಧೀಕರಣ ವೃತ

ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.

ಅಹಂ ತ್ಯಜಿಸುವುದು

ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ

ಗೌರವದ ಸಂಕೇತ

ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…