ಆಧ್ಯಾತ್ಮ

ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

956

ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

 

ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ‘ಭೀಮನ ಅಮಾವಾಸ್ಯೆ’.

ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ.

ಇದಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕೂಡ ಕರೆಯುತ್ತಾರೆ. ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ.

ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ.

ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಆಶೀರ್ವಾದ ಪಡೆಯುವುದು ವಾಡಿಕೆ.

*ಭೀಮನ ಅಮಾವಾಸ್ಯೆ ಹಿನ್ನಲೆಯು ಒಂದು ಪುರಾಣ ಕತೆ ಅವಲಂಬಿಸಿದೆ.

ಆಸೆ ಬುರುಕ ಬ್ರಾಹ್ಮಣನೊಬ್ಬ ರಾಜಕುಮಾರನ ಶವದೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿ ಬಿಡುತ್ತಾನೆ. ಸುರಿಯುತ್ತಿದ್ದ ಮಳೆಯಲ್ಲಿ ಶವವನ್ನೂ ಹಾಗೂ ವಧುವನ್ನೂ ರಾಜ ಪರಿವರದವರೂ ನದಿ ತೀರದಲ್ಲಿ ಬಿಟ್ಟು ಹೋಗುತ್ತಾರೆ. ಶವದ ಮುಂದೆ ಕುಳಿತು ರೋಧಿಸುತ್ತಿದ್ದ ಆ ವಧು, ಮರಳಿನಲ್ಲಿ ಶಿವಲಿಂಗ ಮಾಡಿ ಪೂಜಿಸುತ್ತಾಳೆ. ಅವಳ ಭಕ್ತಿಗೆ ಮೆಚ್ಚಿದ ಶಿವಪಾರ್ವತಿಯರು ಪ್ರತ್ಯಕ್ಷರಾಗಿ ರಾಜಕುಮಾರನಿಗೆ ಜೀವದಾನ ಮಾಡುತ್ತಾರೆ.

ಅಮವಾಸ್ಯೆ ದಿನ ತನ್ನ ಪತಿಯನ್ನು ಬದುಕಿಸಿಕೊಳ್ಳಲು ನಡೆಸಿದ ಪೂಜೆಯೇ ಜ್ಯೋತಿರ್ಭಿಮೇಶ್ವರ ವ್ರತ ಎಂಬ ಐತಿಹ್ಯವಿದೆ.

ಭೀಮನ ಅಮವಾಸ್ಯೆ ವ್ರತಾಚಾರಣೆಯ ಹಿನ್ನೆಲೆಯ ಬಗ್ಗೆ ಇನ್ನು ಒಂದು ಐತಿಹ್ಯ ಇದೆ.
ಕುಂಡಿನಿ ಪಟ್ಟಣದಲ್ಲಿ ಪತಿಭಕ್ತಳೂ, ಶಾಸ್ತ್ರಜ್ಞಳೂ, ನಿರ್ಮಲ ಮನದವಳೂ ಆದ ಚಾರುಮತಿ ಎಂಬ ಸಾಧ್ವಿ ಇರುತ್ತಾಳೆ. ಈ ಬ್ರಾಹ್ಮಣ ಸಾಧ್ವಿಗೆ ಮಹಾಲಕ್ಷ್ಮಿ ಕನಸಿನಲ್ಲಿ ಕಾಣಿಸಿಕೊಂಡು ತನ್ನನ್ನು ನಿರ್ದಿಷ್ಟ ಪ್ರಕಾರವಾಗಿ ಪೂಜಿಸಲು ತಿಳಿಸುತ್ತಾಳೆ. ಅದರಂತೆ ಚಾರುಮತಿ ಮಂಗಳಸ್ನಾನ ಮಾಡಿ, ಅಕ್ಕಿಯಿಂದ ಪರಿವೃತವಾದ ಕಲಶದಲ್ಲಿ ವರಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲ್ಪೋಕ್ತ ಪ್ರಕಾರ ಸಂಧ್ಯಾಕಾಲದಲ್ಲಿ ಅರ್ಚಿಸಿ, ಬಲಗೈಗೆ ದಾರ ಕಟ್ಟಿಕೊಂಡು ತುಪ್ಪದಿಂದ ಮಾಡಿದ ಭಕ್ಷ್ಯಗಳನ್ನು ಬ್ರಾಹ್ಮಣರಿಗೆ ನಿವೇದಿಸಿ, ಸುಹಾಸಿನಿಯರಿಗೆ ದಕ್ಷಿಣೆ ಸಹಿತ ತಾಂಬೂಲ ನೀಡಿ ವ್ರತವಾಚರಿಸುತ್ತಾಳೆ.
ಇದರ ಫಲವಾಗಿ ಅವಳು ಸಕಲ ಸೌಭಾಗ್ಯ ಪಡೆಯುತ್ತಾಳೆ.

ಈ ಪ್ರಕಾರವಾಗಿ ಭೀಮನ ಅಮಾವಾಸ್ಯೆಯ ದಿನ ಹೆಣ್ಣು ಮಕ್ಕಳು ಮತ್ತು ಸುಮಂಗಲಿಯರು ಮಂಗಳಸ್ನಾನ ಮಾಡಿ, ಮಂಟಪ ನಿರ್ಮಿಸಿ, ಅದರಲ್ಲಿ ಧಾನ್ಯರಾಶಿ ಮಾಡಿ, ಅದರ ಮೇಲೆ ದೀಪವನ್ನಿಟ್ಟು, ಗೋಧಿಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನು ನೈವೇದ್ಯ ಮಾಡಿ ಈಶ್ವರನನ್ನು ಆರಾಧಿಸುತ್ತಾರೆ.

ಹೊಸಿಲ ಮೇಲೆ ಭಂಡಾರ ಇಟ್ಟು ಸೋದರರಿಂದ ಒಡೆಸುವ ಪದ್ಧತಿಯೂ ಸಂಪ್ರದಾಯಸ್ಥ ಬ್ರಾಹ್ಮಣರ ಮನೆಯಲ್ಲಿ ಇದೆ.

*ಪೂಜಾ ವಿಧಾನ:*

ಈ ವ್ರತವನ್ನು ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ದಿನ ಆಚರಿಸಬೇಕು. ಹೆಣ್ಣು ಮಕ್ಕಳು ಮದುವೆಯಾದ ನಂತರ ಒಂಭತ್ತು ವರ್ಷ ಈ ವ್ರತ ಮಾಡುವ ಪದ್ಧತಿ ಇದೆ. ಒಂದು ತಟ್ಟೆಯಲ್ಲಿ ಧಾನ್ಯ ರಾಶಿ ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು.

ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು . ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು .ಜೊತಗೆ ಗಣೇಶ ಅಷ್ಟೋತ್ತರ , ಶಿವ ಅಷ್ಟೋತ್ತರ ಗಳನ್ನು ಹೇಳಿಕೊಂಡು ಪೂಜೆ ಮಾಡಬೇಕು.

ಹೀಗೆ ಪ್ರತಿ ವರ್ಷ ಪೂಜೆ ಮಾಡುವುದರಿಂದ ಮನೆಯಲ್ಲಿ ಸುಖ, ಸಂತೋಷ ನೆಮ್ಮದಿ ದೊರೆತು ಆಯುಷ್ಯ, ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಹೆಣ್ಣು ಮಕ್ಕಳು ಪ್ರತಿ ವರ್ಷ ಭೀಮನ ಅಮಾವಾಸ್ಯೆಯಲ್ಲಿ ವ್ರತಾಚರಣೆ ಮಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…

  • ಸುದ್ದಿ

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗುತ್ತಿದ್ದಿರಾ ;ಇನ್ಮುಂದೆ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು,ಇಲ್ಲಿದೆ ನೋಡಿ ಮಾಹಿತಿ,.!!

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್‌ಪಿಜಿ ಪೂರೈಕೆದಾರ ಕಂಪನಿಗಳ ವೆಬ್‌ಸೈಟ್ ಮೂಲಕ ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್‌ ಹೊಂದಿದ್ದು, ಅದರ…

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…