ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.
ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು 10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು. 2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.
ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…