ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್ಗಳಿವೆ.
ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.
ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-
ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.
ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.
ಸರಳ ಜೀವನ:-
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!
ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…