ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು. 2019ರ ಜು.1ರಿಂದ ಈ ನಿಯಮ ಜಾರಿಯಾಗಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಈ ಹೊಸ ನಿಯಮ, ಅನುಷ್ಠಾನ ದಿನಾಂಕವನ್ನು ಅನುಮೋದಿಸಿದ್ದು, ಶೀಘ್ರದಲ್ಲಿಯೇ ಅದನ್ನು ಅಧಿಕೃತವಾಗಿ ಪ್ರಕಟಿಸಲಿದೆ.

ಸದ್ಯ ಏರ್ಬ್ಯಾಗ್, ವೇಗದ ಮಿತಿ ದಾಟಿದರೆ ಮಾಹಿತಿ ನೀಡುವ, ಇತರ ಅತ್ಯಾಧುನಿಕ ವ್ಯವಸ್ಥೆಗಳು ಹೈ ಎಂಡ್ ಮತ್ತು ಲಕ್ಸುರಿ ಕಾರುಗಳಲ್ಲಿ ಮಾತ್ರವೇ ಇದೆ. ಹೊಸ ಮಾದರಿಯ ಕಾರುಗಳಲ್ಲಿ ವೇಗದ ಮಿತಿ 80 ಕಿ.ಮೀ. ದಾಟಿದ ಕೂಡಲೇ ಧ್ವನಿಯ ಮೂಲಕ ಚಾಲಕನಿಗೆ ಅಲರ್ಟ್ ಮಾಡುತ್ತದೆ.

100 ಕಿ.ಮೀ. ದಾಟಿದ ಕೂಡಲೇ ಅದು ಮತ್ತಷ್ಟು ಚುರುಕಾಗಿ ಮಾಹಿತಿ ನೀಡುತ್ತದೆ. 120 ಕಿ.ಮೀ. ವೇಗಕ್ಕೆ ತಲುಪಿದ ಕೂಡಲೇ ಬಿಡದೆ ಅಲರ್ಟ್ ಮಾಡಿ ಚಾಲಕನಿಗೆ ನೆನಪು ಮಾಡುತ್ತದೆ ಎಂದು ರಸ್ತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.
ರಿವರ್ಸ್ ಸೆನ್ಸರ್:- ಅಪಘಾತ ಅಥವಾ ಇನ್ನು ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭ ಸ್ವಯಂಚಾಲಿತ ಲಾಕ್ ಜಾಮ್ ಆಗಿದ್ದರೆ, ಚಾಲಕನ ಅಥವಾ ಕಾರಿನಲ್ಲಿರುವ ಇತರ ವ್ಯಕ್ತಿಗಳಿಗೆ ಹೊರ ಬರಲು ಅನುಕೂಲವಾಗುವಂತೆ ಬಾಗಿಲು ತೆಗೆಯುವಂಥ ವ್ಯವಸ್ಥೆ ಕೂಡ ಇರಲಿದೆ.

ಇದರ ಜತೆಗೆ ಪಾರ್ಕಿಂಗ್ ಸಂದರ್ಭ ವಾಹನಗಳನ್ನು ರಿವರ್ಸ್ ತೆಗೆಯುವಾಗ ಉಂಟಾಗುವ ಅಪಘಾತ ತಪ್ಪಿಸಲು “ರಿವರ್ಸ್ ಸೆನ್ಸರ್’ಗಳನ್ನು ಅಳವಡಿಸಲಾಗುತ್ತದೆ. ಇದಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮತಿ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹಗುರ ವಾಣಿಜ್ಯಿಕ ವಾಹನಗಳಲ್ಲಿ ಏರ್ಬ್ಯಾಗ್ ಮತ್ತು ರಿವರ್ಸ್ ಸೆನ್ಸರ್ ಪಾರ್ಕಿಂಗ್ ಅನ್ನು ಅಳವಡಿಸುವಂತೆ ಸೂಚಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಹೇಳಿದ್ದಾರೆ. ಪಾರ್ಕಿಂಗ್ ಮಾಡುವ ವೇಳೆ ಉಂಟಾಗುವ ಅಪಘಾತ ತಪ್ಪಿಸಲು ಇದು ನೆರವಾಗುತ್ತದೆ.
ಬಿಡುಗಡೆಗೆ ಮುನ್ನ ಪರೀಕ್ಷೆ: -ಇಂಥ ನಿಯಮಗಳ ಜಾರಿಯಿಂದ ಕಾರುಗಳು ಮಾರುಕಟ್ಟೆಗೆ ಬರುವ ಮೊದಲು ವಿದೇಶಗಳಲ್ಲಿರುವಂತೆ ಎಷ್ಟು ಪ್ರಮಾಣದಲ್ಲಿ ಅಪಘಾತ ತಡೆಯಲು ಸಾಧ್ಯ ಎನ್ನುವುದನ್ನು ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಅದರಲ್ಲಿ ತೃಪ್ತಿದಾಯಕ ಫಲಿತಾಂಶ ಬಂದ ಬಳಿಕವೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.