Health, ಆರೋಗ್ಯ, ಉಪಯುಕ್ತ ಮಾಹಿತಿ

ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

69

ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು.

ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ ದೇಶಗಳಿಗೂ ಪ್ರಸರಣ ಹೊಂದಿದೆ. ಭಾರತದಲ್ಲಿ ಸುಮಾರು ೦.೨೮ ದಶ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ೨.೯ ದಶ ಲಕ್ಷ ಟನ್ ಸೇಬನ್ನು ಉತ್ಪಾದಿಸಲಾಗುತ್ತದೆ. ದೇಶದಲ್ಲಿ ಹಣ್ಣಿನ ಉತ್ಪಾದನೆಗೆ ಒಳ ಪಟ್ಟಿರುವ ಒಟ್ಟು ಕ್ಷೇತ್ರದ ೬.೧ರಷ್ಟು ಪ್ರದೇಶದಲ್ಲಿ ಸೇಬನ್ನು ಬೆಳೆಯಲಾಗುತ್ತದೆ.

ಇದರ ಬೆಳವಣಿಗೆಗೆ 4-21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಅತಿ ಸೂಕ್ತ. ಅಲ್ಲದೆ ಸುಮಾರು 100-125 ಸೆ.ಮೀ.ನಷ್ಟು ಮಳೆ ಬೇಕಾಗುತ್ತದೆ.ಮೋಡ ಮುಸುಕಿದ,ಕಡಿಮೆ ಉಷ್ಣಾಂಶದ,ಆರ್ದ್ರ ವಲಯಗಾಲ್ಲಿ ಚೆನ್ನಾಗಿ ಸೇಬು ಬೆಳೆಯುತ್ತದೆ. ಹಂಚಿಕೆ ಮತ್ತು ಉತ್ಪಾದನೆ: ಭಾರತದಲ್ಲಿ ಸೇಬಿನ ಬೇಸಾಯವು ಕೆಲವೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿದೆ. ಜಮ್ಮು ಮತ್ತು ಕಾಶ್ಮೀರ,ಹಿಮಾಚಲ ಪ್ರದೇಶ,ಉತ್ತರಾಖಂಡ,ಪಂಜಾಬ್,ಅರುಣಾಚಲ ಪ್ರದೇಶ,ನಾಗಾಲ್ಯಾಂಡ್,ಮೇಘಾಲಯ ಮತ್ತು ಮಣಿಪುರಗಳಲ್ಲಿ ಸೇಬಿನ ಬೇಸಾಯವು ಹಂಚಿಕೆಯಾಗಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈಶಾನ್ಯದ ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಉನ್ನತ ಪ್ರದೇಶದಲ್ಲಿ ಸೇಬಿನ ಬೇಸಾಯವನ್ನು ಅಭಿವೃದ್ಧಿಪಡಿಸಲಾಗಿದೆ.

ಸೇಬು ನಮ್ಮ ದೈನ೦ದಿನ ಅವಶ್ಯಕತೆಯ ಖನಿಜಾ೦ಶಗಳು, ವಿಟಮಿನ್‌ಗಳು, ಹಾಗೂ ಪ್ರೋಟೀನ್‌ಗಳ ಸಮೃದ್ಧ ಆಗರವಾಗಿದೆ. ಪ್ರತಿ ದಿನವೂ ಸೇಬೊ೦ದನ್ನು ಸೇವಿಸುವುದರ ಮೂಲಕ ನೀವು ಉತ್ತಮ ಆರೋಗ್ಯವುಳ್ಳವರಾಗಿಯೂ ಹಾಗೂ ಸದೃಢರಾಗಿಯೂ ಜೀವಿಸಲು ಸಾಧ್ಯ. ಸೇಬು ತನ್ನಲ್ಲಿ ನಾರಿನ೦ಶ, ಆ೦ಟಿಆಕ್ಸಿಡೆ೦ಟ್, ಹಾಗೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ವಿಟಮಿನ್ ಸಿ ಯನ್ನು ಅಗಾಧ ಪ್ರಮಾಣದಲ್ಲಿ ದಾಸ್ತಾನಿರಿಸಿಕೊ೦ಡಿದೆ.ಸಿಪ್ಪೆ ಸಮೇತವಾಗಿ ಸೇಬನ್ನು ಸೇವಿಸುವುದರಿ೦ದ ನೀವು ಅದರ ಸ೦ಪೂರ್ಣವಾದ ಪ್ರಯೋಜನಗಳನ್ನು ಅಥವಾ ಲಾಭಗಳನ್ನು ಪಡೆದ೦ತಾಗುತ್ತದೆ. ಸೇಬಿನ ಸಿಪ್ಪೆಯನ್ನು ತೆಗೆದು ತಿನ್ನುವುದು ಒ೦ದು ಒಳ್ಳೆಯ ಲಕ್ಷಣವಲ್ಲ. ಏಕೆ೦ದರೆ, ಸೇಬಿನ ತಿರುಳಿನಲ್ಲಿರುವುದಕ್ಕಿ೦ತಲೂ ಹೆಚ್ಚಿನ ಪ್ರಮಾಣದ ಆ೦ಟಿ ಆಕ್ಸಿಡೆ೦ಟ್‌ಗಳು ಅದರ ಸಿಪ್ಪೆಯಲ್ಲಿರುತ್ತದೆ

ಹೃದಯದ ಆರೋಗ್ಯ ಕಾಪಾಡುವುದು  ಸೇಬು ತಿಂದರೆ ಅದರಿಂದ ಕೊಲೆಸ್ಟ್ರಾಲ್ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುವುದು ಮತ್ತು ಇದರಿಂದ ರಕ್ತನಾಳಗಳಲ್ಲಿ ತುಂಬಿರುವಂತಹ ಪದರವು ಶೇ.48ರಷ್ಟು ಕಡಿಮೆ ಆಗುವುದು ಎಂದು ಅಧ್ಯಯನಗಳು ಹೇಳಿವೆ.

ಸೇಬಿನಿಂದಾಗಿ ಮಹಿಳೆಯರಲ್ಲಿ ಹೃದಯ ಕಾಯಿಲೆಯಿಂದ ಸಾವಿನ ಪ್ರಮಾಣವು ಶೇ.43ರಷ್ಟು ಮತ್ತು ಪುರುಷರಲ್ಲಿ ಶೇ.19ರಷ್ಟು ಕಡಿಮೆ ಆಗಿದೆ ಎಂದು ಅಧ್ಯಯನಗಳು ಹೇಳಿವೆ. ಇದಕ್ಕಾಗಿ ದಿನಕ್ಕೆ 54 ಗ್ರಾಂ ಸೇಬು ತಿನ್ನುವುದು ಅಗತ್ಯವಾಗಿದೆ. ಇದು ಅಪಧಮನಿ ಆರೋಗ್ಯ ಕಾಪಾಡುವುದು.

ತೂಕ ಇಳಿಸಲು  ಸೇಬಿನಲ್ಲಿ ಸಸ್ಯಜನ್ಯವಾಗಿರುವಂತಹ ನಾರಿನಾಂಶವಿದೆ ಮತ್ತು ತುಂಬಾ ಕಡಿಮೆ ಪ್ರಮಾಣದ ಕ್ಯಾಲರಿ ಇದೆ. ಇದರಿಂದ ತೂಕ ಕಳೆದುಕೊಳ್ಳಲು ಇದು ತುಂಬಾ ಸಹಕಾರಿ ಆಗಿರುವುದು. ಇದು ಕ್ಯಾಲರಿ ಕಡಿಮೆ ಮಾಡುವುದು. ದಿನಕ್ಕೆ 300 ಗ್ರಾಂ ಸೇಬು ತಿಂದರೆ ಮಹಿಳೆಯರಲ್ಲಿ 12 ವಾರಗಳಲ್ಲಿ 1.3 ಕೆಜಿ ತೂಕ ಇಳಿಕೆ ಆಗಿದೆ.

ತ್ವಚೆಯ ಹೊಳಪು ಹೆಚ್ಚುತ್ತದೆ   ವಯಸ್ಸಾದಂತೆ ಚರ್ಮ ಹೊಳಪು ಕಳೆದುಕೊಂಡು ನೆರಿಗೆಗಳು ಮೂಡುತ್ತಾ ಬರುತ್ತವೆ. ಇದನ್ನು ತಡೆಯಲು ಸಾಧ್ಯವಿಲ್ಲವಾದರೂ ಪರಿಣಾಮವನ್ನು ನಿಧಾನಗೊಳಿಸಲು ಸಾಧ್ಯವಿದೆ. ಸೇಬಿನಲ್ಲಿರುವ ಹಲವು ಆಂಟಿ ಆಕ್ಸೆಡೆಂಟುಗಳ ಪರಿಣಾಮವಾಗಿ ಚರ್ಮದ ಜೀವಕೋಶಗಳು ನಾಶವಾಗಿ ನೆರಿಗೆ ಮೂಡುವುದು ನಿಧಾನವಾಗುತ್ತದೆ.

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ  ದೇಹದಲ್ಲಿನ ಕೊಲೆಸ್ಟ್ರಾಲ್ ನರಗಳ ಒಳಭಾಗದಲ್ಲಿ ಅಥವಾ ತಿರುವಿರುವೆಡೆಯಲ್ಲಿನ ಮೂಲೆಗಳಲ್ಲಿ ಸಂಗ್ರಹವಾಗುತ್ತಾ ಹೋಗುತ್ತದೆ. ಕ್ರಮೇಣ ಈ ಸಂಗ್ರಹ ಹೆಚ್ಚುತ್ತಾ ಹೋಗಿ ನರಗಳ ಒಳಭಾಗದ ವ್ಯಾಸವನ್ನು ಕಿರಿದುಗೊಳಿಸುವುದರಿಂದ ಹೃದಯ ಹೆಚ್ಚಿನ ಒತ್ತಡದಲ್ಲಿ ರಕ್ತವನ್ನು ದೂಡಿಕೊಡಬೇಕಾಗುತ್ತದೆ.

ಸೇಬಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿ ಸಂಚರಿಸುವ ಮೂಲಕ ನರಗಳ ಒಳಭಾಗದಲ್ಲಿ ಅಂಟಿಕೊಂಡಿರುವ ಈ ಜಿಡ್ಡನ್ನು ಸಡಿಲಗೊಳಿಸುತ್ತವೆ. ಪರಿಣಾಮವಾಗಿ ಕೆಟ್ಟ ಕೊಲೆಸ್ಟ್ರಾಲ್ ರಕ್ತದೊಡನೆ ಹರಿದು ಹೋಗಿ ಶೋಧನಾ ವ್ಯವಸ್ಥೆಯ ಮೂಲಕ ವಿಸರ್ಜಿಸಲ್ಪಡುತ್ತದೆ. ಹೃದಯದ ಒತ್ತಡ ಸಾಮಾನ್ಯಕ್ಕೆ ಹಿಂದಿರುಗಿ ಉತ್ತಮ ಆರೋಗ್ಯ ಲಭಿಸುತ್ತ

ಕ್ಯಾನ್ಸರ್ ಅನ್ನು ತಡೆಗಟ್ಟುತ್ತದೆ  ಸೇಬಿನಲ್ಲಿ ಇರುವಂತಹ ಕೆಲವೊಂದು ಸಸ್ಯಜನ್ಯ ಅಂಶಗಳು ಕ್ಯಾನ್ಸರ್ ವಿರೋಧಿ ಅಂಶವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಕಂಡುಕೊಂಡಿದೆ ಮತ್ತು ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಮತ್ತು ಪೈಥೋನ್ಯೂಟ್ರಿಯಂಟ್ಸ್ ಗಳು ಕರುಳು ಮತ್ತು ಶ್ವಾಸಕೋಶದ ಕ್ಯಾನ್ಸರ್ ನ್ನು ತಡೆಯುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.

ಮಧುಮೇಹ ಕಾಯಿಲೆ ಯನ್ನು ತಡೆಯುತ್ತದೆ   ಮಧುಮೇಹ ದೇಹದ ಸಕ್ಕರೆಯನ್ನು ಕರಗಿಸಲು ಅಗತ್ಯವಾದ ಇನ್ಸುಲಿನ್ ಉತ್ಪಾದನೆಯನ್ನು ಕುಂಠಿತಗೊಳಿಸುವ ಅಥವಾ ಉತ್ಪಾದನೆಯಾದ ಇನ್ಸುಲಿನ್ ಬಳಕೆಯಾಗದೇ ಸಕ್ಕರೆ ವ್ಯರ್ಥವಾಗುವ ಒಂದು ಕಾಯಿಲೆ .

ಸೇಬುಹಣ್ಣಿನಲ್ಲಿರುವ  ಪೋಷಕಾಂಶಗಳು ಮತ್ತು ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ.ರೋಗನಿರೋಧಕ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ನೆರವಾಗುವ ವಿಟಮಿನ್ ಸಿ ಯು ಸೇಬಿನಲ್ಲಿರುವ ಹಲವಾರು ಘಟಕಗಳ ಪೈಕಿ ಒ೦ದಾಗಿರುತ್ತದೆ. ವಿಟಮಿನ್ ಸಿ ಯು ನಮ್ಮ ಶರೀರವನ್ನು ಬಾಹ್ಯ ಸೂಕ್ಷಾಣುಜೀವಿಗಳ ಆಕ್ರಮಣದಿ೦ದ ರಕ್ಷಿಸಲು ನೆರವಾಗುತ್ತದೆ.

 ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಅನ್ನು ತಡೆಗಟ್ಟುತ್ತದೆ  ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಉ೦ಟಾಗಲು ಇರುವ ಹಲವಾರು ಪ್ರಮುಖವಾದ ಕಾರಣಗಳ ಪೈಕಿ ಒ೦ದು ಯಾವುದೆ೦ದರೆ ಉತ್ಕರ್ಷಣೀಯ ಶೈಥಿಲ್ಯ ವಾಗಿರುತ್ತದೆ. ಸೇಬುಗಳ ನಿಯಮಿತವಾದ ಸೇವನೆಯು ಮುಕ್ತ ರಾಡಿಕಲ್‌ಗಳನ್ನು ನಿವಾರಿಸಲು ನೆರವಾಗುತ್ತದೆ ಹಾಗೂ ತನ್ಮೂಲಕ ಕಣ್ಣುಗಳು ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಗೆ ಗುರಿಯಾಗುವುದನ್ನು ತಪ್ಪಿಸುತ್ತದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಾಕಿಸ್ಥಾನ ಸೋತ ಖುಷಿಯಲ್ಲಿ ಅರೆಬೆತ್ತಲೆ ಕುಣಿದಂತಹ ಪೂನ್ಂ ಪಾಂಡೆ ಅವಾಂತರ…!

    ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್​ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್​ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…