ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು.

ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ ದೇಶಗಳಿಗೂ ಪ್ರಸರಣ ಹೊಂದಿದೆ. ಭಾರತದಲ್ಲಿ ಸುಮಾರು ೦.೨೮ ದಶ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ೨.೯ ದಶ ಲಕ್ಷ ಟನ್ ಸೇಬನ್ನು ಉತ್ಪಾದಿಸಲಾಗುತ್ತದೆ. ದೇಶದಲ್ಲಿ ಹಣ್ಣಿನ ಉತ್ಪಾದನೆಗೆ ಒಳ ಪಟ್ಟಿರುವ ಒಟ್ಟು ಕ್ಷೇತ್ರದ ೬.೧ರಷ್ಟು ಪ್ರದೇಶದಲ್ಲಿ ಸೇಬನ್ನು ಬೆಳೆಯಲಾಗುತ್ತದೆ.

ಇದರ ಬೆಳವಣಿಗೆಗೆ 4-21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಅತಿ ಸೂಕ್ತ. ಅಲ್ಲದೆ ಸುಮಾರು 100-125 ಸೆ.ಮೀ.ನಷ್ಟು ಮಳೆ ಬೇಕಾಗುತ್ತದೆ.ಮೋಡ ಮುಸುಕಿದ,ಕಡಿಮೆ ಉಷ್ಣಾಂಶದ,ಆರ್ದ್ರ ವಲಯಗಾಲ್ಲಿ ಚೆನ್ನಾಗಿ ಸೇಬು ಬೆಳೆಯುತ್ತದೆ. ಹಂಚಿಕೆ ಮತ್ತು ಉತ್ಪಾದನೆ: ಭಾರತದಲ್ಲಿ ಸೇಬಿನ ಬೇಸಾಯವು ಕೆಲವೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿದೆ. ಜಮ್ಮು ಮತ್ತು ಕಾಶ್ಮೀರ,ಹಿಮಾಚಲ ಪ್ರದೇಶ,ಉತ್ತರಾಖಂಡ,ಪಂಜಾಬ್,ಅರುಣಾಚಲ ಪ್ರದೇಶ,ನಾಗಾಲ್ಯಾಂಡ್,ಮೇಘಾಲಯ ಮತ್ತು ಮಣಿಪುರಗಳಲ್ಲಿ ಸೇಬಿನ ಬೇಸಾಯವು ಹಂಚಿಕೆಯಾಗಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈಶಾನ್ಯದ ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಉನ್ನತ ಪ್ರದೇಶದಲ್ಲಿ ಸೇಬಿನ ಬೇಸಾಯವನ್ನು ಅಭಿವೃದ್ಧಿಪಡಿಸಲಾಗಿದೆ.

ಸೇಬು ನಮ್ಮ ದೈನ೦ದಿನ ಅವಶ್ಯಕತೆಯ ಖನಿಜಾ೦ಶಗಳು, ವಿಟಮಿನ್ಗಳು, ಹಾಗೂ ಪ್ರೋಟೀನ್ಗಳ ಸಮೃದ್ಧ ಆಗರವಾಗಿದೆ. ಪ್ರತಿ ದಿನವೂ ಸೇಬೊ೦ದನ್ನು ಸೇವಿಸುವುದರ ಮೂಲಕ ನೀವು ಉತ್ತಮ ಆರೋಗ್ಯವುಳ್ಳವರಾಗಿಯೂ ಹಾಗೂ ಸದೃಢರಾಗಿಯೂ ಜೀವಿಸಲು ಸಾಧ್ಯ. ಸೇಬು ತನ್ನಲ್ಲಿ ನಾರಿನ೦ಶ, ಆ೦ಟಿಆಕ್ಸಿಡೆ೦ಟ್, ಹಾಗೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ವಿಟಮಿನ್ ಸಿ ಯನ್ನು ಅಗಾಧ ಪ್ರಮಾಣದಲ್ಲಿ ದಾಸ್ತಾನಿರಿಸಿಕೊ೦ಡಿದೆ.ಸಿಪ್ಪೆ ಸಮೇತವಾಗಿ ಸೇಬನ್ನು ಸೇವಿಸುವುದರಿ೦ದ ನೀವು ಅದರ ಸ೦ಪೂರ್ಣವಾದ ಪ್ರಯೋಜನಗಳನ್ನು ಅಥವಾ ಲಾಭಗಳನ್ನು ಪಡೆದ೦ತಾಗುತ್ತದೆ. ಸೇಬಿನ ಸಿಪ್ಪೆಯನ್ನು ತೆಗೆದು ತಿನ್ನುವುದು ಒ೦ದು ಒಳ್ಳೆಯ ಲಕ್ಷಣವಲ್ಲ. ಏಕೆ೦ದರೆ, ಸೇಬಿನ ತಿರುಳಿನಲ್ಲಿರುವುದಕ್ಕಿ೦ತಲೂ ಹೆಚ್ಚಿನ ಪ್ರಮಾಣದ ಆ೦ಟಿ ಆಕ್ಸಿಡೆ೦ಟ್ಗಳು ಅದರ ಸಿಪ್ಪೆಯಲ್ಲಿರುತ್ತದೆ
ಹೃದಯದ ಆರೋಗ್ಯ ಕಾಪಾಡುವುದು ಸೇಬು ತಿಂದರೆ ಅದರಿಂದ ಕೊಲೆಸ್ಟ್ರಾಲ್ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುವುದು ಮತ್ತು ಇದರಿಂದ ರಕ್ತನಾಳಗಳಲ್ಲಿ ತುಂಬಿರುವಂತಹ ಪದರವು ಶೇ.48ರಷ್ಟು ಕಡಿಮೆ ಆಗುವುದು ಎಂದು ಅಧ್ಯಯನಗಳು ಹೇಳಿವೆ.

ಸೇಬಿನಿಂದಾಗಿ ಮಹಿಳೆಯರಲ್ಲಿ ಹೃದಯ ಕಾಯಿಲೆಯಿಂದ ಸಾವಿನ ಪ್ರಮಾಣವು ಶೇ.43ರಷ್ಟು ಮತ್ತು ಪುರುಷರಲ್ಲಿ ಶೇ.19ರಷ್ಟು ಕಡಿಮೆ ಆಗಿದೆ ಎಂದು ಅಧ್ಯಯನಗಳು ಹೇಳಿವೆ. ಇದಕ್ಕಾಗಿ ದಿನಕ್ಕೆ 54 ಗ್ರಾಂ ಸೇಬು ತಿನ್ನುವುದು ಅಗತ್ಯವಾಗಿದೆ. ಇದು ಅಪಧಮನಿ ಆರೋಗ್ಯ ಕಾಪಾಡುವುದು.
ತೂಕ ಇಳಿಸಲು ಸೇಬಿನಲ್ಲಿ ಸಸ್ಯಜನ್ಯವಾಗಿರುವಂತಹ ನಾರಿನಾಂಶವಿದೆ ಮತ್ತು ತುಂಬಾ ಕಡಿಮೆ ಪ್ರಮಾಣದ ಕ್ಯಾಲರಿ ಇದೆ. ಇದರಿಂದ ತೂಕ ಕಳೆದುಕೊಳ್ಳಲು ಇದು ತುಂಬಾ ಸಹಕಾರಿ ಆಗಿರುವುದು. ಇದು ಕ್ಯಾಲರಿ ಕಡಿಮೆ ಮಾಡುವುದು. ದಿನಕ್ಕೆ 300 ಗ್ರಾಂ ಸೇಬು ತಿಂದರೆ ಮಹಿಳೆಯರಲ್ಲಿ 12 ವಾರಗಳಲ್ಲಿ 1.3 ಕೆಜಿ ತೂಕ ಇಳಿಕೆ ಆಗಿದೆ.
ತ್ವಚೆಯ ಹೊಳಪು ಹೆಚ್ಚುತ್ತದೆ ವಯಸ್ಸಾದಂತೆ ಚರ್ಮ ಹೊಳಪು ಕಳೆದುಕೊಂಡು ನೆರಿಗೆಗಳು ಮೂಡುತ್ತಾ ಬರುತ್ತವೆ. ಇದನ್ನು ತಡೆಯಲು ಸಾಧ್ಯವಿಲ್ಲವಾದರೂ ಪರಿಣಾಮವನ್ನು ನಿಧಾನಗೊಳಿಸಲು ಸಾಧ್ಯವಿದೆ. ಸೇಬಿನಲ್ಲಿರುವ ಹಲವು ಆಂಟಿ ಆಕ್ಸೆಡೆಂಟುಗಳ ಪರಿಣಾಮವಾಗಿ ಚರ್ಮದ ಜೀವಕೋಶಗಳು ನಾಶವಾಗಿ ನೆರಿಗೆ ಮೂಡುವುದು ನಿಧಾನವಾಗುತ್ತದೆ.
ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ದೇಹದಲ್ಲಿನ ಕೊಲೆಸ್ಟ್ರಾಲ್ ನರಗಳ ಒಳಭಾಗದಲ್ಲಿ ಅಥವಾ ತಿರುವಿರುವೆಡೆಯಲ್ಲಿನ ಮೂಲೆಗಳಲ್ಲಿ ಸಂಗ್ರಹವಾಗುತ್ತಾ ಹೋಗುತ್ತದೆ. ಕ್ರಮೇಣ ಈ ಸಂಗ್ರಹ ಹೆಚ್ಚುತ್ತಾ ಹೋಗಿ ನರಗಳ ಒಳಭಾಗದ ವ್ಯಾಸವನ್ನು ಕಿರಿದುಗೊಳಿಸುವುದರಿಂದ ಹೃದಯ ಹೆಚ್ಚಿನ ಒತ್ತಡದಲ್ಲಿ ರಕ್ತವನ್ನು ದೂಡಿಕೊಡಬೇಕಾಗುತ್ತದೆ.

ಸೇಬಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿ ಸಂಚರಿಸುವ ಮೂಲಕ ನರಗಳ ಒಳಭಾಗದಲ್ಲಿ ಅಂಟಿಕೊಂಡಿರುವ ಈ ಜಿಡ್ಡನ್ನು ಸಡಿಲಗೊಳಿಸುತ್ತವೆ. ಪರಿಣಾಮವಾಗಿ ಕೆಟ್ಟ ಕೊಲೆಸ್ಟ್ರಾಲ್ ರಕ್ತದೊಡನೆ ಹರಿದು ಹೋಗಿ ಶೋಧನಾ ವ್ಯವಸ್ಥೆಯ ಮೂಲಕ ವಿಸರ್ಜಿಸಲ್ಪಡುತ್ತದೆ. ಹೃದಯದ ಒತ್ತಡ ಸಾಮಾನ್ಯಕ್ಕೆ ಹಿಂದಿರುಗಿ ಉತ್ತಮ ಆರೋಗ್ಯ ಲಭಿಸುತ್ತ
ಕ್ಯಾನ್ಸರ್ ಅನ್ನು ತಡೆಗಟ್ಟುತ್ತದೆ ಸೇಬಿನಲ್ಲಿ ಇರುವಂತಹ ಕೆಲವೊಂದು ಸಸ್ಯಜನ್ಯ ಅಂಶಗಳು ಕ್ಯಾನ್ಸರ್ ವಿರೋಧಿ ಅಂಶವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಕಂಡುಕೊಂಡಿದೆ ಮತ್ತು ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಮತ್ತು ಪೈಥೋನ್ಯೂಟ್ರಿಯಂಟ್ಸ್ ಗಳು ಕರುಳು ಮತ್ತು ಶ್ವಾಸಕೋಶದ ಕ್ಯಾನ್ಸರ್ ನ್ನು ತಡೆಯುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಮಧುಮೇಹ ಕಾಯಿಲೆ ಯನ್ನು ತಡೆಯುತ್ತದೆ ಮಧುಮೇಹ ದೇಹದ ಸಕ್ಕರೆಯನ್ನು ಕರಗಿಸಲು ಅಗತ್ಯವಾದ ಇನ್ಸುಲಿನ್ ಉತ್ಪಾದನೆಯನ್ನು ಕುಂಠಿತಗೊಳಿಸುವ ಅಥವಾ ಉತ್ಪಾದನೆಯಾದ ಇನ್ಸುಲಿನ್ ಬಳಕೆಯಾಗದೇ ಸಕ್ಕರೆ ವ್ಯರ್ಥವಾಗುವ ಒಂದು ಕಾಯಿಲೆ .

ಸೇಬುಹಣ್ಣಿನಲ್ಲಿರುವ ಪೋಷಕಾಂಶಗಳು ಮತ್ತು ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ.ರೋಗನಿರೋಧಕ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ನೆರವಾಗುವ ವಿಟಮಿನ್ ಸಿ ಯು ಸೇಬಿನಲ್ಲಿರುವ ಹಲವಾರು ಘಟಕಗಳ ಪೈಕಿ ಒ೦ದಾಗಿರುತ್ತದೆ. ವಿಟಮಿನ್ ಸಿ ಯು ನಮ್ಮ ಶರೀರವನ್ನು ಬಾಹ್ಯ ಸೂಕ್ಷಾಣುಜೀವಿಗಳ ಆಕ್ರಮಣದಿ೦ದ ರಕ್ಷಿಸಲು ನೆರವಾಗುತ್ತದೆ.
ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಅನ್ನು ತಡೆಗಟ್ಟುತ್ತದೆ ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಉ೦ಟಾಗಲು ಇರುವ ಹಲವಾರು ಪ್ರಮುಖವಾದ ಕಾರಣಗಳ ಪೈಕಿ ಒ೦ದು ಯಾವುದೆ೦ದರೆ ಉತ್ಕರ್ಷಣೀಯ ಶೈಥಿಲ್ಯ ವಾಗಿರುತ್ತದೆ. ಸೇಬುಗಳ ನಿಯಮಿತವಾದ ಸೇವನೆಯು ಮುಕ್ತ ರಾಡಿಕಲ್ಗಳನ್ನು ನಿವಾರಿಸಲು ನೆರವಾಗುತ್ತದೆ ಹಾಗೂ ತನ್ಮೂಲಕ ಕಣ್ಣುಗಳು ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಗೆ ಗುರಿಯಾಗುವುದನ್ನು ತಪ್ಪಿಸುತ್ತದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…