News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Health, ಆರೋಗ್ಯ, ಉಪಯುಕ್ತ ಮಾಹಿತಿ

ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

73

ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು.

ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ ದೇಶಗಳಿಗೂ ಪ್ರಸರಣ ಹೊಂದಿದೆ. ಭಾರತದಲ್ಲಿ ಸುಮಾರು ೦.೨೮ ದಶ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ೨.೯ ದಶ ಲಕ್ಷ ಟನ್ ಸೇಬನ್ನು ಉತ್ಪಾದಿಸಲಾಗುತ್ತದೆ. ದೇಶದಲ್ಲಿ ಹಣ್ಣಿನ ಉತ್ಪಾದನೆಗೆ ಒಳ ಪಟ್ಟಿರುವ ಒಟ್ಟು ಕ್ಷೇತ್ರದ ೬.೧ರಷ್ಟು ಪ್ರದೇಶದಲ್ಲಿ ಸೇಬನ್ನು ಬೆಳೆಯಲಾಗುತ್ತದೆ.

ಇದರ ಬೆಳವಣಿಗೆಗೆ 4-21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಅತಿ ಸೂಕ್ತ. ಅಲ್ಲದೆ ಸುಮಾರು 100-125 ಸೆ.ಮೀ.ನಷ್ಟು ಮಳೆ ಬೇಕಾಗುತ್ತದೆ.ಮೋಡ ಮುಸುಕಿದ,ಕಡಿಮೆ ಉಷ್ಣಾಂಶದ,ಆರ್ದ್ರ ವಲಯಗಾಲ್ಲಿ ಚೆನ್ನಾಗಿ ಸೇಬು ಬೆಳೆಯುತ್ತದೆ. ಹಂಚಿಕೆ ಮತ್ತು ಉತ್ಪಾದನೆ: ಭಾರತದಲ್ಲಿ ಸೇಬಿನ ಬೇಸಾಯವು ಕೆಲವೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿದೆ. ಜಮ್ಮು ಮತ್ತು ಕಾಶ್ಮೀರ,ಹಿಮಾಚಲ ಪ್ರದೇಶ,ಉತ್ತರಾಖಂಡ,ಪಂಜಾಬ್,ಅರುಣಾಚಲ ಪ್ರದೇಶ,ನಾಗಾಲ್ಯಾಂಡ್,ಮೇಘಾಲಯ ಮತ್ತು ಮಣಿಪುರಗಳಲ್ಲಿ ಸೇಬಿನ ಬೇಸಾಯವು ಹಂಚಿಕೆಯಾಗಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈಶಾನ್ಯದ ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಉನ್ನತ ಪ್ರದೇಶದಲ್ಲಿ ಸೇಬಿನ ಬೇಸಾಯವನ್ನು ಅಭಿವೃದ್ಧಿಪಡಿಸಲಾಗಿದೆ.

ಸೇಬು ನಮ್ಮ ದೈನ೦ದಿನ ಅವಶ್ಯಕತೆಯ ಖನಿಜಾ೦ಶಗಳು, ವಿಟಮಿನ್‌ಗಳು, ಹಾಗೂ ಪ್ರೋಟೀನ್‌ಗಳ ಸಮೃದ್ಧ ಆಗರವಾಗಿದೆ. ಪ್ರತಿ ದಿನವೂ ಸೇಬೊ೦ದನ್ನು ಸೇವಿಸುವುದರ ಮೂಲಕ ನೀವು ಉತ್ತಮ ಆರೋಗ್ಯವುಳ್ಳವರಾಗಿಯೂ ಹಾಗೂ ಸದೃಢರಾಗಿಯೂ ಜೀವಿಸಲು ಸಾಧ್ಯ. ಸೇಬು ತನ್ನಲ್ಲಿ ನಾರಿನ೦ಶ, ಆ೦ಟಿಆಕ್ಸಿಡೆ೦ಟ್, ಹಾಗೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ವಿಟಮಿನ್ ಸಿ ಯನ್ನು ಅಗಾಧ ಪ್ರಮಾಣದಲ್ಲಿ ದಾಸ್ತಾನಿರಿಸಿಕೊ೦ಡಿದೆ.ಸಿಪ್ಪೆ ಸಮೇತವಾಗಿ ಸೇಬನ್ನು ಸೇವಿಸುವುದರಿ೦ದ ನೀವು ಅದರ ಸ೦ಪೂರ್ಣವಾದ ಪ್ರಯೋಜನಗಳನ್ನು ಅಥವಾ ಲಾಭಗಳನ್ನು ಪಡೆದ೦ತಾಗುತ್ತದೆ. ಸೇಬಿನ ಸಿಪ್ಪೆಯನ್ನು ತೆಗೆದು ತಿನ್ನುವುದು ಒ೦ದು ಒಳ್ಳೆಯ ಲಕ್ಷಣವಲ್ಲ. ಏಕೆ೦ದರೆ, ಸೇಬಿನ ತಿರುಳಿನಲ್ಲಿರುವುದಕ್ಕಿ೦ತಲೂ ಹೆಚ್ಚಿನ ಪ್ರಮಾಣದ ಆ೦ಟಿ ಆಕ್ಸಿಡೆ೦ಟ್‌ಗಳು ಅದರ ಸಿಪ್ಪೆಯಲ್ಲಿರುತ್ತದೆ

ಹೃದಯದ ಆರೋಗ್ಯ ಕಾಪಾಡುವುದು  ಸೇಬು ತಿಂದರೆ ಅದರಿಂದ ಕೊಲೆಸ್ಟ್ರಾಲ್ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುವುದು ಮತ್ತು ಇದರಿಂದ ರಕ್ತನಾಳಗಳಲ್ಲಿ ತುಂಬಿರುವಂತಹ ಪದರವು ಶೇ.48ರಷ್ಟು ಕಡಿಮೆ ಆಗುವುದು ಎಂದು ಅಧ್ಯಯನಗಳು ಹೇಳಿವೆ.

ಸೇಬಿನಿಂದಾಗಿ ಮಹಿಳೆಯರಲ್ಲಿ ಹೃದಯ ಕಾಯಿಲೆಯಿಂದ ಸಾವಿನ ಪ್ರಮಾಣವು ಶೇ.43ರಷ್ಟು ಮತ್ತು ಪುರುಷರಲ್ಲಿ ಶೇ.19ರಷ್ಟು ಕಡಿಮೆ ಆಗಿದೆ ಎಂದು ಅಧ್ಯಯನಗಳು ಹೇಳಿವೆ. ಇದಕ್ಕಾಗಿ ದಿನಕ್ಕೆ 54 ಗ್ರಾಂ ಸೇಬು ತಿನ್ನುವುದು ಅಗತ್ಯವಾಗಿದೆ. ಇದು ಅಪಧಮನಿ ಆರೋಗ್ಯ ಕಾಪಾಡುವುದು.

ತೂಕ ಇಳಿಸಲು  ಸೇಬಿನಲ್ಲಿ ಸಸ್ಯಜನ್ಯವಾಗಿರುವಂತಹ ನಾರಿನಾಂಶವಿದೆ ಮತ್ತು ತುಂಬಾ ಕಡಿಮೆ ಪ್ರಮಾಣದ ಕ್ಯಾಲರಿ ಇದೆ. ಇದರಿಂದ ತೂಕ ಕಳೆದುಕೊಳ್ಳಲು ಇದು ತುಂಬಾ ಸಹಕಾರಿ ಆಗಿರುವುದು. ಇದು ಕ್ಯಾಲರಿ ಕಡಿಮೆ ಮಾಡುವುದು. ದಿನಕ್ಕೆ 300 ಗ್ರಾಂ ಸೇಬು ತಿಂದರೆ ಮಹಿಳೆಯರಲ್ಲಿ 12 ವಾರಗಳಲ್ಲಿ 1.3 ಕೆಜಿ ತೂಕ ಇಳಿಕೆ ಆಗಿದೆ.

ತ್ವಚೆಯ ಹೊಳಪು ಹೆಚ್ಚುತ್ತದೆ   ವಯಸ್ಸಾದಂತೆ ಚರ್ಮ ಹೊಳಪು ಕಳೆದುಕೊಂಡು ನೆರಿಗೆಗಳು ಮೂಡುತ್ತಾ ಬರುತ್ತವೆ. ಇದನ್ನು ತಡೆಯಲು ಸಾಧ್ಯವಿಲ್ಲವಾದರೂ ಪರಿಣಾಮವನ್ನು ನಿಧಾನಗೊಳಿಸಲು ಸಾಧ್ಯವಿದೆ. ಸೇಬಿನಲ್ಲಿರುವ ಹಲವು ಆಂಟಿ ಆಕ್ಸೆಡೆಂಟುಗಳ ಪರಿಣಾಮವಾಗಿ ಚರ್ಮದ ಜೀವಕೋಶಗಳು ನಾಶವಾಗಿ ನೆರಿಗೆ ಮೂಡುವುದು ನಿಧಾನವಾಗುತ್ತದೆ.

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ  ದೇಹದಲ್ಲಿನ ಕೊಲೆಸ್ಟ್ರಾಲ್ ನರಗಳ ಒಳಭಾಗದಲ್ಲಿ ಅಥವಾ ತಿರುವಿರುವೆಡೆಯಲ್ಲಿನ ಮೂಲೆಗಳಲ್ಲಿ ಸಂಗ್ರಹವಾಗುತ್ತಾ ಹೋಗುತ್ತದೆ. ಕ್ರಮೇಣ ಈ ಸಂಗ್ರಹ ಹೆಚ್ಚುತ್ತಾ ಹೋಗಿ ನರಗಳ ಒಳಭಾಗದ ವ್ಯಾಸವನ್ನು ಕಿರಿದುಗೊಳಿಸುವುದರಿಂದ ಹೃದಯ ಹೆಚ್ಚಿನ ಒತ್ತಡದಲ್ಲಿ ರಕ್ತವನ್ನು ದೂಡಿಕೊಡಬೇಕಾಗುತ್ತದೆ.

ಸೇಬಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿ ಸಂಚರಿಸುವ ಮೂಲಕ ನರಗಳ ಒಳಭಾಗದಲ್ಲಿ ಅಂಟಿಕೊಂಡಿರುವ ಈ ಜಿಡ್ಡನ್ನು ಸಡಿಲಗೊಳಿಸುತ್ತವೆ. ಪರಿಣಾಮವಾಗಿ ಕೆಟ್ಟ ಕೊಲೆಸ್ಟ್ರಾಲ್ ರಕ್ತದೊಡನೆ ಹರಿದು ಹೋಗಿ ಶೋಧನಾ ವ್ಯವಸ್ಥೆಯ ಮೂಲಕ ವಿಸರ್ಜಿಸಲ್ಪಡುತ್ತದೆ. ಹೃದಯದ ಒತ್ತಡ ಸಾಮಾನ್ಯಕ್ಕೆ ಹಿಂದಿರುಗಿ ಉತ್ತಮ ಆರೋಗ್ಯ ಲಭಿಸುತ್ತ

ಕ್ಯಾನ್ಸರ್ ಅನ್ನು ತಡೆಗಟ್ಟುತ್ತದೆ  ಸೇಬಿನಲ್ಲಿ ಇರುವಂತಹ ಕೆಲವೊಂದು ಸಸ್ಯಜನ್ಯ ಅಂಶಗಳು ಕ್ಯಾನ್ಸರ್ ವಿರೋಧಿ ಅಂಶವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಕಂಡುಕೊಂಡಿದೆ ಮತ್ತು ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಮತ್ತು ಪೈಥೋನ್ಯೂಟ್ರಿಯಂಟ್ಸ್ ಗಳು ಕರುಳು ಮತ್ತು ಶ್ವಾಸಕೋಶದ ಕ್ಯಾನ್ಸರ್ ನ್ನು ತಡೆಯುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.

ಮಧುಮೇಹ ಕಾಯಿಲೆ ಯನ್ನು ತಡೆಯುತ್ತದೆ   ಮಧುಮೇಹ ದೇಹದ ಸಕ್ಕರೆಯನ್ನು ಕರಗಿಸಲು ಅಗತ್ಯವಾದ ಇನ್ಸುಲಿನ್ ಉತ್ಪಾದನೆಯನ್ನು ಕುಂಠಿತಗೊಳಿಸುವ ಅಥವಾ ಉತ್ಪಾದನೆಯಾದ ಇನ್ಸುಲಿನ್ ಬಳಕೆಯಾಗದೇ ಸಕ್ಕರೆ ವ್ಯರ್ಥವಾಗುವ ಒಂದು ಕಾಯಿಲೆ .

ಸೇಬುಹಣ್ಣಿನಲ್ಲಿರುವ  ಪೋಷಕಾಂಶಗಳು ಮತ್ತು ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ.ರೋಗನಿರೋಧಕ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ನೆರವಾಗುವ ವಿಟಮಿನ್ ಸಿ ಯು ಸೇಬಿನಲ್ಲಿರುವ ಹಲವಾರು ಘಟಕಗಳ ಪೈಕಿ ಒ೦ದಾಗಿರುತ್ತದೆ. ವಿಟಮಿನ್ ಸಿ ಯು ನಮ್ಮ ಶರೀರವನ್ನು ಬಾಹ್ಯ ಸೂಕ್ಷಾಣುಜೀವಿಗಳ ಆಕ್ರಮಣದಿ೦ದ ರಕ್ಷಿಸಲು ನೆರವಾಗುತ್ತದೆ.

 ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಅನ್ನು ತಡೆಗಟ್ಟುತ್ತದೆ  ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಉ೦ಟಾಗಲು ಇರುವ ಹಲವಾರು ಪ್ರಮುಖವಾದ ಕಾರಣಗಳ ಪೈಕಿ ಒ೦ದು ಯಾವುದೆ೦ದರೆ ಉತ್ಕರ್ಷಣೀಯ ಶೈಥಿಲ್ಯ ವಾಗಿರುತ್ತದೆ. ಸೇಬುಗಳ ನಿಯಮಿತವಾದ ಸೇವನೆಯು ಮುಕ್ತ ರಾಡಿಕಲ್‌ಗಳನ್ನು ನಿವಾರಿಸಲು ನೆರವಾಗುತ್ತದೆ ಹಾಗೂ ತನ್ಮೂಲಕ ಕಣ್ಣುಗಳು ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಗೆ ಗುರಿಯಾಗುವುದನ್ನು ತಪ್ಪಿಸುತ್ತದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

    ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…