News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Health, ಆರೋಗ್ಯ, ಉಪಯುಕ್ತ ಮಾಹಿತಿ

ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

71

ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು.

ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ ದೇಶಗಳಿಗೂ ಪ್ರಸರಣ ಹೊಂದಿದೆ. ಭಾರತದಲ್ಲಿ ಸುಮಾರು ೦.೨೮ ದಶ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ೨.೯ ದಶ ಲಕ್ಷ ಟನ್ ಸೇಬನ್ನು ಉತ್ಪಾದಿಸಲಾಗುತ್ತದೆ. ದೇಶದಲ್ಲಿ ಹಣ್ಣಿನ ಉತ್ಪಾದನೆಗೆ ಒಳ ಪಟ್ಟಿರುವ ಒಟ್ಟು ಕ್ಷೇತ್ರದ ೬.೧ರಷ್ಟು ಪ್ರದೇಶದಲ್ಲಿ ಸೇಬನ್ನು ಬೆಳೆಯಲಾಗುತ್ತದೆ.

ಇದರ ಬೆಳವಣಿಗೆಗೆ 4-21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಅತಿ ಸೂಕ್ತ. ಅಲ್ಲದೆ ಸುಮಾರು 100-125 ಸೆ.ಮೀ.ನಷ್ಟು ಮಳೆ ಬೇಕಾಗುತ್ತದೆ.ಮೋಡ ಮುಸುಕಿದ,ಕಡಿಮೆ ಉಷ್ಣಾಂಶದ,ಆರ್ದ್ರ ವಲಯಗಾಲ್ಲಿ ಚೆನ್ನಾಗಿ ಸೇಬು ಬೆಳೆಯುತ್ತದೆ. ಹಂಚಿಕೆ ಮತ್ತು ಉತ್ಪಾದನೆ: ಭಾರತದಲ್ಲಿ ಸೇಬಿನ ಬೇಸಾಯವು ಕೆಲವೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿದೆ. ಜಮ್ಮು ಮತ್ತು ಕಾಶ್ಮೀರ,ಹಿಮಾಚಲ ಪ್ರದೇಶ,ಉತ್ತರಾಖಂಡ,ಪಂಜಾಬ್,ಅರುಣಾಚಲ ಪ್ರದೇಶ,ನಾಗಾಲ್ಯಾಂಡ್,ಮೇಘಾಲಯ ಮತ್ತು ಮಣಿಪುರಗಳಲ್ಲಿ ಸೇಬಿನ ಬೇಸಾಯವು ಹಂಚಿಕೆಯಾಗಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈಶಾನ್ಯದ ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಉನ್ನತ ಪ್ರದೇಶದಲ್ಲಿ ಸೇಬಿನ ಬೇಸಾಯವನ್ನು ಅಭಿವೃದ್ಧಿಪಡಿಸಲಾಗಿದೆ.

ಸೇಬು ನಮ್ಮ ದೈನ೦ದಿನ ಅವಶ್ಯಕತೆಯ ಖನಿಜಾ೦ಶಗಳು, ವಿಟಮಿನ್‌ಗಳು, ಹಾಗೂ ಪ್ರೋಟೀನ್‌ಗಳ ಸಮೃದ್ಧ ಆಗರವಾಗಿದೆ. ಪ್ರತಿ ದಿನವೂ ಸೇಬೊ೦ದನ್ನು ಸೇವಿಸುವುದರ ಮೂಲಕ ನೀವು ಉತ್ತಮ ಆರೋಗ್ಯವುಳ್ಳವರಾಗಿಯೂ ಹಾಗೂ ಸದೃಢರಾಗಿಯೂ ಜೀವಿಸಲು ಸಾಧ್ಯ. ಸೇಬು ತನ್ನಲ್ಲಿ ನಾರಿನ೦ಶ, ಆ೦ಟಿಆಕ್ಸಿಡೆ೦ಟ್, ಹಾಗೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ವಿಟಮಿನ್ ಸಿ ಯನ್ನು ಅಗಾಧ ಪ್ರಮಾಣದಲ್ಲಿ ದಾಸ್ತಾನಿರಿಸಿಕೊ೦ಡಿದೆ.ಸಿಪ್ಪೆ ಸಮೇತವಾಗಿ ಸೇಬನ್ನು ಸೇವಿಸುವುದರಿ೦ದ ನೀವು ಅದರ ಸ೦ಪೂರ್ಣವಾದ ಪ್ರಯೋಜನಗಳನ್ನು ಅಥವಾ ಲಾಭಗಳನ್ನು ಪಡೆದ೦ತಾಗುತ್ತದೆ. ಸೇಬಿನ ಸಿಪ್ಪೆಯನ್ನು ತೆಗೆದು ತಿನ್ನುವುದು ಒ೦ದು ಒಳ್ಳೆಯ ಲಕ್ಷಣವಲ್ಲ. ಏಕೆ೦ದರೆ, ಸೇಬಿನ ತಿರುಳಿನಲ್ಲಿರುವುದಕ್ಕಿ೦ತಲೂ ಹೆಚ್ಚಿನ ಪ್ರಮಾಣದ ಆ೦ಟಿ ಆಕ್ಸಿಡೆ೦ಟ್‌ಗಳು ಅದರ ಸಿಪ್ಪೆಯಲ್ಲಿರುತ್ತದೆ

ಹೃದಯದ ಆರೋಗ್ಯ ಕಾಪಾಡುವುದು  ಸೇಬು ತಿಂದರೆ ಅದರಿಂದ ಕೊಲೆಸ್ಟ್ರಾಲ್ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುವುದು ಮತ್ತು ಇದರಿಂದ ರಕ್ತನಾಳಗಳಲ್ಲಿ ತುಂಬಿರುವಂತಹ ಪದರವು ಶೇ.48ರಷ್ಟು ಕಡಿಮೆ ಆಗುವುದು ಎಂದು ಅಧ್ಯಯನಗಳು ಹೇಳಿವೆ.

ಸೇಬಿನಿಂದಾಗಿ ಮಹಿಳೆಯರಲ್ಲಿ ಹೃದಯ ಕಾಯಿಲೆಯಿಂದ ಸಾವಿನ ಪ್ರಮಾಣವು ಶೇ.43ರಷ್ಟು ಮತ್ತು ಪುರುಷರಲ್ಲಿ ಶೇ.19ರಷ್ಟು ಕಡಿಮೆ ಆಗಿದೆ ಎಂದು ಅಧ್ಯಯನಗಳು ಹೇಳಿವೆ. ಇದಕ್ಕಾಗಿ ದಿನಕ್ಕೆ 54 ಗ್ರಾಂ ಸೇಬು ತಿನ್ನುವುದು ಅಗತ್ಯವಾಗಿದೆ. ಇದು ಅಪಧಮನಿ ಆರೋಗ್ಯ ಕಾಪಾಡುವುದು.

ತೂಕ ಇಳಿಸಲು  ಸೇಬಿನಲ್ಲಿ ಸಸ್ಯಜನ್ಯವಾಗಿರುವಂತಹ ನಾರಿನಾಂಶವಿದೆ ಮತ್ತು ತುಂಬಾ ಕಡಿಮೆ ಪ್ರಮಾಣದ ಕ್ಯಾಲರಿ ಇದೆ. ಇದರಿಂದ ತೂಕ ಕಳೆದುಕೊಳ್ಳಲು ಇದು ತುಂಬಾ ಸಹಕಾರಿ ಆಗಿರುವುದು. ಇದು ಕ್ಯಾಲರಿ ಕಡಿಮೆ ಮಾಡುವುದು. ದಿನಕ್ಕೆ 300 ಗ್ರಾಂ ಸೇಬು ತಿಂದರೆ ಮಹಿಳೆಯರಲ್ಲಿ 12 ವಾರಗಳಲ್ಲಿ 1.3 ಕೆಜಿ ತೂಕ ಇಳಿಕೆ ಆಗಿದೆ.

ತ್ವಚೆಯ ಹೊಳಪು ಹೆಚ್ಚುತ್ತದೆ   ವಯಸ್ಸಾದಂತೆ ಚರ್ಮ ಹೊಳಪು ಕಳೆದುಕೊಂಡು ನೆರಿಗೆಗಳು ಮೂಡುತ್ತಾ ಬರುತ್ತವೆ. ಇದನ್ನು ತಡೆಯಲು ಸಾಧ್ಯವಿಲ್ಲವಾದರೂ ಪರಿಣಾಮವನ್ನು ನಿಧಾನಗೊಳಿಸಲು ಸಾಧ್ಯವಿದೆ. ಸೇಬಿನಲ್ಲಿರುವ ಹಲವು ಆಂಟಿ ಆಕ್ಸೆಡೆಂಟುಗಳ ಪರಿಣಾಮವಾಗಿ ಚರ್ಮದ ಜೀವಕೋಶಗಳು ನಾಶವಾಗಿ ನೆರಿಗೆ ಮೂಡುವುದು ನಿಧಾನವಾಗುತ್ತದೆ.

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ  ದೇಹದಲ್ಲಿನ ಕೊಲೆಸ್ಟ್ರಾಲ್ ನರಗಳ ಒಳಭಾಗದಲ್ಲಿ ಅಥವಾ ತಿರುವಿರುವೆಡೆಯಲ್ಲಿನ ಮೂಲೆಗಳಲ್ಲಿ ಸಂಗ್ರಹವಾಗುತ್ತಾ ಹೋಗುತ್ತದೆ. ಕ್ರಮೇಣ ಈ ಸಂಗ್ರಹ ಹೆಚ್ಚುತ್ತಾ ಹೋಗಿ ನರಗಳ ಒಳಭಾಗದ ವ್ಯಾಸವನ್ನು ಕಿರಿದುಗೊಳಿಸುವುದರಿಂದ ಹೃದಯ ಹೆಚ್ಚಿನ ಒತ್ತಡದಲ್ಲಿ ರಕ್ತವನ್ನು ದೂಡಿಕೊಡಬೇಕಾಗುತ್ತದೆ.

ಸೇಬಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿ ಸಂಚರಿಸುವ ಮೂಲಕ ನರಗಳ ಒಳಭಾಗದಲ್ಲಿ ಅಂಟಿಕೊಂಡಿರುವ ಈ ಜಿಡ್ಡನ್ನು ಸಡಿಲಗೊಳಿಸುತ್ತವೆ. ಪರಿಣಾಮವಾಗಿ ಕೆಟ್ಟ ಕೊಲೆಸ್ಟ್ರಾಲ್ ರಕ್ತದೊಡನೆ ಹರಿದು ಹೋಗಿ ಶೋಧನಾ ವ್ಯವಸ್ಥೆಯ ಮೂಲಕ ವಿಸರ್ಜಿಸಲ್ಪಡುತ್ತದೆ. ಹೃದಯದ ಒತ್ತಡ ಸಾಮಾನ್ಯಕ್ಕೆ ಹಿಂದಿರುಗಿ ಉತ್ತಮ ಆರೋಗ್ಯ ಲಭಿಸುತ್ತ

ಕ್ಯಾನ್ಸರ್ ಅನ್ನು ತಡೆಗಟ್ಟುತ್ತದೆ  ಸೇಬಿನಲ್ಲಿ ಇರುವಂತಹ ಕೆಲವೊಂದು ಸಸ್ಯಜನ್ಯ ಅಂಶಗಳು ಕ್ಯಾನ್ಸರ್ ವಿರೋಧಿ ಅಂಶವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಕಂಡುಕೊಂಡಿದೆ ಮತ್ತು ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಮತ್ತು ಪೈಥೋನ್ಯೂಟ್ರಿಯಂಟ್ಸ್ ಗಳು ಕರುಳು ಮತ್ತು ಶ್ವಾಸಕೋಶದ ಕ್ಯಾನ್ಸರ್ ನ್ನು ತಡೆಯುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.

ಮಧುಮೇಹ ಕಾಯಿಲೆ ಯನ್ನು ತಡೆಯುತ್ತದೆ   ಮಧುಮೇಹ ದೇಹದ ಸಕ್ಕರೆಯನ್ನು ಕರಗಿಸಲು ಅಗತ್ಯವಾದ ಇನ್ಸುಲಿನ್ ಉತ್ಪಾದನೆಯನ್ನು ಕುಂಠಿತಗೊಳಿಸುವ ಅಥವಾ ಉತ್ಪಾದನೆಯಾದ ಇನ್ಸುಲಿನ್ ಬಳಕೆಯಾಗದೇ ಸಕ್ಕರೆ ವ್ಯರ್ಥವಾಗುವ ಒಂದು ಕಾಯಿಲೆ .

ಸೇಬುಹಣ್ಣಿನಲ್ಲಿರುವ  ಪೋಷಕಾಂಶಗಳು ಮತ್ತು ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ.ರೋಗನಿರೋಧಕ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ನೆರವಾಗುವ ವಿಟಮಿನ್ ಸಿ ಯು ಸೇಬಿನಲ್ಲಿರುವ ಹಲವಾರು ಘಟಕಗಳ ಪೈಕಿ ಒ೦ದಾಗಿರುತ್ತದೆ. ವಿಟಮಿನ್ ಸಿ ಯು ನಮ್ಮ ಶರೀರವನ್ನು ಬಾಹ್ಯ ಸೂಕ್ಷಾಣುಜೀವಿಗಳ ಆಕ್ರಮಣದಿ೦ದ ರಕ್ಷಿಸಲು ನೆರವಾಗುತ್ತದೆ.

 ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಅನ್ನು ತಡೆಗಟ್ಟುತ್ತದೆ  ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಉ೦ಟಾಗಲು ಇರುವ ಹಲವಾರು ಪ್ರಮುಖವಾದ ಕಾರಣಗಳ ಪೈಕಿ ಒ೦ದು ಯಾವುದೆ೦ದರೆ ಉತ್ಕರ್ಷಣೀಯ ಶೈಥಿಲ್ಯ ವಾಗಿರುತ್ತದೆ. ಸೇಬುಗಳ ನಿಯಮಿತವಾದ ಸೇವನೆಯು ಮುಕ್ತ ರಾಡಿಕಲ್‌ಗಳನ್ನು ನಿವಾರಿಸಲು ನೆರವಾಗುತ್ತದೆ ಹಾಗೂ ತನ್ಮೂಲಕ ಕಣ್ಣುಗಳು ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಗೆ ಗುರಿಯಾಗುವುದನ್ನು ತಪ್ಪಿಸುತ್ತದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…