ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.
9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ
ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್…
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…