News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

34

ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಕೇಪ್‌ಟೌನ್‌ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್‌ಟೌನ್‌ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್‌ಎಸ್‌ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್‌ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್‌ಎಸ್‌, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • ಉಪಯುಕ್ತ ಮಾಹಿತಿ

    ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.