ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಕೇಪ್ಟೌನ್ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್ಟೌನ್ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್ಎಸ್ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್ಎಸ್, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…