India

ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

128

ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:

ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್​ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್​ ಸಂಕುಲ್​ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ.

ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.

35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.

ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ.

ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.

ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…