ಆರೋಗ್ಯ

ಕಂಪ್ಯೂಟರ್‌ನ ಮುಂದೆ ಹೆಚ್ಚು ಹೊತ್ತು ಕೆಲಸ ಮಾಡ್ತೀರಾ?ಹಾಗಾದರೆ ಇದನ್ನು ನೀವು ಓದಲೇಬೇಕು….

602

ಬಹುತೇಕರು ಈಗಂತೂ ಕಂಪ್ಯೂಟರ್‌ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.

ಕಂಪ್ಯೂಟರ್‌ನ ಮುಂದೆ ಗಂಟೆಗಟ್ಟಲೆ ಒಂದೇ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ದೇಹ ದುರ್ಬಲವಾಗುತ್ತದೆ.

ಇದರಿಂದ ಆಗುವ ಪರಿಣಾಮಗಳಿಂದ ತಪ್ಪಿಸಿ ಕೊಳ್ಳಲು ಕೆಳಗೆ ಕೊಟ್ಟಿರುವ ಕೆಲುವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ :-

  • ತಾಸುಗಟ್ಟಲೆ ಕಂಪ್ಯೂಟರ್ ಪರದೆಯನ್ನು ನೋಡಿ ಕೆಲಸ ಮಾಡುವಾಗ ಅದರ ಮಧ್ಯೆ ಅಂದರೆ ಪ್ರತಿ ಅರ್ಧ ಗಂಟೆಗೊಮ್ಮೆ ಸ್ವಲ್ಪ ನಡೆದಾಡುವ ಅಭ್ಯಾಸ ರೂಢಿಸಿಕೊಳ್ಳಿ.
  • ಸುಮಾರು ಎರಡು ನಿಮಿಷಗಳ ಕಾಲ ನಡೆದಾಡಿ ಭುಜಗಳನ್ನು ಕೈಗಳಲ್ಲಿ ಹಿಡಿದುಕೊಂಡು ಮೇಲೆ ಕೆಳಗೆ ಮಾಡಿ. ಈ ರೀತಿ 30 ಸೆಕೆಂಡುಗಳ ಕಾಲ ಮಾಡಿದರೆ ಕೈಗಳಿಗೆ ಸಾಕಷ್ಟು ವ್ಯಾಯಾಮ ಸಿಗುತ್ತದೆ.
  • ಇದೇ ರೀತಿ ಕಂಪ್ಯೂಟರ್‌ನ ಮುಂದೆ ಕುಳಿತುಕೊಳ್ಳುವಾಗ ನಿಮ್ಮ ತಲೆಯನ್ನು ನೇರವಾಗಿ ಇರಿಸಿಕೊಳ್ಳಿ. ತಲೆಯನ್ನು ಬಾಗಿಸಿ ಅಥವಾ ಭುಜಗಳಿಗೆ ಓರೆಯಾಗಿ ಇರಿಸಿ ಕೆಲಸ ಮಾಡಬೇಡಿ.
  •  ಗದ್ದವನ್ನು 5 ಸೆಕೆಂಡುಗಳ ಕಾಲ ಮೇಲೆ ಕೆಳಗೆ ಮಾಡಿ. ಇದನ್ನು ದಿನದಲ್ಲಿ 10 ಬಾರಿ ಮಾಡಿದರೆ ಕುತ್ತಿಗೆಯ ಸ್ನಾಯುಗಳು ಸಾಮಾನ್ಯ ಸ್ಥಿತಿಗೆ ಮರಳುತ್ತವೆ.
  •  ನೀವು ಕುಳಿತುಕೊಳ್ಳುವ ಕುರ್ಚಿಯ ಮೇಲೆ ಕುಷನ್ ಅಥವಾ ದಿಂಬನ್ನು ಇಡಿ. ಇದರಿಂದ ಬೆನ್ನು ಹುರಿ ನೆಟ್ಟಗಿರುತ್ತದೆ ಮತ್ತು ಬೆನ್ನು ನೋವು ಬರುವುದಿಲ್ಲ.
  • ದೇಹದಲ್ಲಿ ಸೂಕ್ತವಾದ ರಕ್ತ ಪರಿಚಲನೆಗೆ ಕಾಲುಗಳ ಪಾತ್ರ ಮುಖ್ಯವಾದುದು. ಆದ್ದರಿಂದ ಕಾಲುಗಳಿಗೂ ಸೂಕ್ತ ವ್ಯಾಯಾಮ ಅತ್ಯಗತ್ಯ. ಪಾದದ ಅಡಿಭಾಗವನ್ನು ಪೂರ್ತಿಯಾಗಿ ನೆಲಗಳಿಗೆ ಸ್ಪರ್ಶಿಸಿ. ಬಳಿಕ ಅದನ್ನು ವೃತ್ತಾಕಾರವಾಗಿ ತಿರುಗಿಸಿ.
  •  ದಿನವಿಡೀ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳಬೇಡಿ. ಮಂಡಿಗಳನ್ನು ತೊಡೆಗಳಿಗೆ ಸಮನಾಗುವಂತೆ ಅಗಲವಾಗಿಡಿ ಅಥವಾ ತೊಡೆಗಳ ಕೆಳಗೆ ಇಡಿ. ಆಗ ಪಾದಗಳು ನೆಲಕ್ಕೆ ಸ್ಪರ್ಶಿಸುತ್ತವೆ.
  • ಎತ್ತರ ಹಿಮ್ಮಡಿಯಿರುವ ಪಾದರಕ್ಷೆಗಳನ್ನು ಧರಿಸುವವರು ಕೆಲಸದ ಮಧ್ಯೆ ಆಗಾಗ ಪಾದರಕ್ಷೆ ಇಲ್ಲದೆ ನಡೆಯಬೇಕು. ಇದರಿಂದ ಕಾಲುಗಳಿಗೆ ರಕ್ತ ಪರಿಚಲನೆ ಸುಗಮಗೊಳ್ಳುವುದು ಮಾತ್ರವಲ್ಲದೆ, ದೇಹದ ಎಲ್ಲಾ ಭಾಗಗಳಿಗೂ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…