ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.

ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.

ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…