ಆರೋಗ್ಯ

ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

773

ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..

ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು,  ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.

ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.

ಕ್ಯಾರೆಟ್

ಕ್ಯಾರೆಟ್‌ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

ಪಾಲಕ್ ಸೊಪ್ಪು

ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.

ದಾಳಿಂಬೆ ಹಣ್ಣು

ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

ಬ್ರೋಕೋಲಿ

ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.

 

 

 ಬೆರ್ರಿ ಹಣ್ಣುಗಳು

ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ವ್ಯಕ್ತಿ ವಿಶೇಷಣ

    ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

    ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
    ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.

  • ಆರೋಗ್ಯ

    ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

    ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…