ಉಪಯುಕ್ತ ಮಾಹಿತಿ

ನಿಮ್ಮ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಅಡುಗೆ ಮನೆಯಲ್ಲಿ ದೊರೆಯುತ್ತವೆ! ತಿಳಿಯಲು ಈ ಲೇಖನ ಓದಿ…

822

ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ…

ಅಡುಗೆ ಮನೆ ಔಷಧಾಲಯ:-

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿ:-

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.

ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

 

ಸಾಸಿವೆ:

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ :

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಜೀರಿಗೆ :

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಕೊತ್ತಂಬರಿ (ಧನಿಯಾ) :

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

 

ಬೆಳ್ಳುಳ್ಳಿ :

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅರಿಶಿಣ:

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.

ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.

ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್‌ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.

ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.

  • ಸುದ್ದಿ

    ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

    ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…