ಉಪಯುಕ್ತ ಮಾಹಿತಿ

ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

759

ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು.

ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ ಲಿವರ್ ಬೇಗ ಕ್ರಿಯಾ ಹೀನವಾಗಬಹುದು.

ಏಳು ಬಗೆಯ ವೀಳ್ಯದೆಲೆಗಳನ್ನು ಆಯುರ್ವೇದದಲ್ಲಿ ಬಣ್ಣಿಸಲಾಗಿದೆ. ವೀಳ್ಯದೆಲೆಯಿಂದಾದ ಹೆಂಡವನ್ನು ಆಯುರ್ವೇದದಲ್ಲಿ ಕೆಲ ರೋಗಗಳಿಗೆ ಮದ್ದನ್ನಾಗಿ ಉಪಯೋಗಿಸಲು ಹೇಳಿದೆ.

  • ಗಾಯಕ್ಕೆ ವೀಳ್ಯದೆಲೆಯ ರಸದ ಜೊತೆಗೆ ನಿಂಬೆಹಣ್ಣನ್ನು ಬೆರೆಸಿ ಹಚ್ಚಿದರೆ ಗಾಯ ಬೇಗ ಗುಣವಾಗುತ್ತದೆ.
  • ವೀಳ್ಯದೆಲೆಯನ್ನು ಕಿವಿಗಳ ಮೇಲೆ ಕಟ್ಟಿದರೆ ಗ್ಯಾಸ್ಟಿಕ್‌ನಿಂದ ಉಂಟಾಗುವ ತಲೆನೋವು ಗುಣವಾಗುತ್ತದೆ.
  • ಒಂದೆರಡು ವೀಳ್ಯದೆಲೆಯನ್ನು ದಿನಕ್ಕೆ ಎರಡು -ಮೂರು ಬಾರಿ ಜಗಿದರೆ ಕಫಯುಕ್ತ ಕೆಮ್ಮು ಕಡಿಮೆಯಾಗುತ್ತದೆ.
  • ವೀಳ್ಯದೆಲೆಯನ್ನು ಸರಿಯಾಗಿ ಸ್ವಚ್ಛಗೊಳಿಸಿ ಅದನ್ನು ರುಬ್ಬಿ ಸಾವಯವ ಜೇನುತುಪ್ಪ ಬೆರೆಸಿ ಸುಟ್ಟ ಜಾಗಕ್ಕೆ ಹಚ್ಚಿಕೊಳ್ಳಿ. ಇದ್ರಿಂದ ಸುಟ್ಟ ಉರಿ ಕಡಿಮೆಯಾಗಿ ಹಿತವೆನಿಸುತ್ತದೆ.

  • ವೀಳ್ಯದೆಲೆ ರಸಕ್ಕೆ, ತುಳಸಿ ಎಲೆಯ ರಸ, 1 ಚಮಚ ಜೇನುತುಪ್ಪ ಸೇರಿಸಿ ಸೇವಿಸಿದರೆ ನೆಗಡಿ ವಾಸಿ.
  • 5 ವೀಳ್ಯದೆಲೆಯನ್ನು ತೆಗೆದುಕೊಳ್ಳಿ. ಅದನ್ನು ಸ್ವಚ್ಛವಾಗಿ ತೊಳೆಯಿರಿ. ನಂತ್ರ ವೀಳ್ಯದೆಲೆಯನ್ನು ರುಬ್ಬಿ ಒಂದು ಟೀ ಚಮಚ ಜೇನು ತುಪ್ಪವನ್ನು ಬೆರೆಸಿ ಫೇಸ್ ಪ್ಯಾಕ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಿ. ವಾರದಲ್ಲಿ ಎರಡು ಬಾರಿಯಂತೆ 2 ತಿಂಗಳು ಮಾಡಿ. ಒಣಗಿದ ಚರ್ಮ ಮೃದುವಾಗಿ ಚರ್ಮ ಕಾಂತಿ ಪಡೆಯುತ್ತದೆ.
  • ಮೊಡವೆಯನ್ನು ವೀಳ್ಯದೆಲೆ ದೂರ ಮಾಡುತ್ತದೆ. ವೀಳ್ಯದೆಲೆಯನ್ನು ನೀರಿಗೆ ಹಾಕಿ ಕುದಿಸಿ. ನೀರಿನ ಬಣ್ಣ ಬದಲಾದ ತಕ್ಷಣ ಗ್ಯಾಸ್ ಬಂದ್ ಮಾಡಿ. ಈ ನೀರಿನಲ್ಲಿ ಮುಖ ತೊಳೆಯುವುದರಿಂದ ಮೊಡವೆ ಕಡಿಮೆಯಾಗುತ್ತದೆ.

  • ವೀಳ್ಯದೆಲೆ ಬೇರನ್ನು ಜಗಿದರೆ ಸ್ವರವು ಮೃದುವಾಗುತ್ತದೆ.
  • ಮೊಡವೆಯನ್ನು ವೀಳ್ಯದೆಲೆ ದೂರ ಮಾಡುತ್ತದೆ. ವೀಳ್ಯದೆಲೆಯನ್ನು ನೀರಿಗೆ ಹಾಕಿ ಕುದಿಸಿ. ನೀರಿನ ಬಣ್ಣ ಬದಲಾದ ತಕ್ಷಣ ಗ್ಯಾಸ್ ಬಂದ್ ಮಾಡಿ. ಈ ನೀರಿನಲ್ಲಿ ಮುಖ ತೊಳೆಯುವುದರಿಂದ ಮೊಡವೆ ಕಡಿಮೆಯಾಗುತ್ತದೆ.
  • ಮೂರ್ನಾಲ್ಕು ಮಿಲಿ ವೀಳ್ಯದೆಲೆಯ ರಸವನ್ನು 1 ಚಮಚ ಜೇನು ತುಪ್ಪದ ಜತೆ ಸೇವಿಸಿದರೆ ಒಣ ಕೆಮ್ಮು ಕಮ್ಮಿಯಾಗುತ್ತದೆ.
  • ಕೆಮ್ಮು ಹಾಗೂ ಕಫದ ಸಮಸ್ಯೆಗೆ 1 ವೀಳ್ಯದೆಲೆಯಲ್ಲಿ ಒಂದೆರಡು ಹರಳು ಉಪ್ಪು ಹಾಗೂ ಒಂದೆರಡು ಕರಿಮೆಣಸನ್ನು ಸೇರಿಸಿ ಸೇವಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…