ಸುದ್ದಿ

ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

42

ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ ಮೊದಲ ಹಾಗೂ ಪ್ರಮುಖ ಸವಾಲು. ವಿಧಾನಸಭಾ ಚುನಾವಣೆ ಫಲಿತಾಂಶ ನಂತರ ಪ್ರಮಾಣವಚನ ಸ್ವೀಕರಿಸಿ, ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ಮೂರೇ ದಿನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗಲೂ ಆಗುತ್ತಾ..? ಅಥವಾ ಆಗಲ್ವಾ..? ಎಂಬ ಕುತೂಹಲ ಮೂಡಿದೆ.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 105 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್, ಜೆಡಿಎಸ್‌ನ 16 ಶಾಸಕರು ರಾಜೀನಾಮೆ ಕೊಟ್ಟು ಮುಂಬೈನಲ್ಲಿ ಠಿಕಾಣಿ ಹೂಡಿದ್ದಾರೆ. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಆರ್‌.ಶಂಕರ್ ಅನರ್ಹ ನಂತರ ವಿಧಾಸನಭೆ ಬಲ 221ಕ್ಕೆ ಕುಸಿದಿದೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹ ಆದರೆ ಬಿಜೆಪಿಗೆ ತೊಂದರೆ ಇಲ್ಲ. ಒಂದು ವೇಳೆ ಅವರು ಕೊನೆ ಕ್ಷಣದಲ್ಲಿ ನಿಷ್ಠೆ ಬದಲಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ವಾಪಸ್ಸಾದರೆ ಬಿಜೆಪಿ ಸರ್ಕಾರಕ್ಕೆ ಆಪತ್ತು ತಪ್ಪಿದ್ದಲ್ಲ. ಈ ಆತಂಕವೇ ಬಿಜೆಪಿ ವರಿಷ್ಠ ಅಮಿತ್‌ ಶಾಗೆ ಕಾಡ್ತಿದೆ.

ಅಮಿತ್‌ ಶಾ ಷರತ್ತುಗಳಿಗೆ ಒಪ್ಪಿಕೊಂಡು ಸರ್ಕಾರ ರಚಿಸಿರುವ ಯಡಿಯೂರಪ್ಪ ಅವರ ಮುಂದೆ ಈಗ ಬಹುಮತ ಸಾಬೀತು ಸವಾಲು ಇದೆ. ಸೋಮವಾರ ಅಥವಾ ಮಂಗಳವಾರ ಸದನದಲ್ಲಿ ಬಹುಮತ ಸಾಬೀತು ಪಡಿಸುವ ಸಾಧ್ಯತೆ ಇದೆ.

ಇತ್ತ, ಬಿಜೆಪಿ ಸರ್ಕಾರ ರಚನೆಗೆ ಆಕ್ಷೇಪ ಎತ್ತಿರುವ ಕಾಂಗ್ರೆಸ್ -ಜೆಡಿಎಸ್‌, ಬಹುಮತ ಇಲ್ಲದೆ ಸರ್ಕಾರ ರಚನೆಗೆ ಹೇಗೆ ಸಾಧ್ಯ..? ಎಂದು ಪ್ರಶ್ನಿಸಿವೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿ ರಾಜ್ಯಪಾಲರ ಕ್ರಮ ಖಂಡಿಸಿವೆ. ಬಿಜೆಪಿಗೆ ಬಹುಮತ ಇಲ್ಲದಿದ್ದರೂ ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ‌ ನೀಡಿದ್ದು, ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್‌ ಹೇಳಿದೆ. ದೇಶದ ಕುದುರೆ ವ್ಯಾಪಾರ ಪಕ್ಷವೊಂದು ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುತ್ತಿದೆ ಎಂದು ಟೀಕಿಸಿದೆ.

ಪ್ರಜಾಪ್ರಭುತ್ವದ ಪ್ರಕಾರ ಬಿಜೆಪಿ ಸರ್ಕಾರ ರಚನೆ ಅಸಾಧ್ಯ. ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುತ್ತಿರುವ ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಬಿಜೆಪಿಗೆ ಈಗ ಕೇವಲ 105 ಶಾಸಕರ ಸಂಖ್ಯ ಬಲವಷ್ಟೇ ಇದೆ. ಉಳಿದ 6 ಜನರಿಗೆ ಅವರು ಏನು ಮಾಡುತ್ತಾರೆ..? ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.ಮಹಾರಾಷ್ಟ್ರದ ವಿವಿದೆಡೆ ಬೀಡುಬಿಟ್ಟಿರುವ ಅತೃಪ್ತ ಶಾಸಕರು ಯಡಿಯೂರಪ್ಪ ಬಹುಮತ ಸಾಬೀತು ಮಾಡುವವರೆಗೆ ಅಲ್ಲಿಯೇ ಠಿಕಾಣಿ ಹೂಡಲಿದ್ದಾರೆ. ಯಾವತ್ತು ಬಿಎಸ್‌ವೈ ಸದನದಲ್ಲಿ ಬಹುಮತ ಸಾಬೀತು ಮಾಡ್ತಾರೋ ಅಂದು ಕರ್ನಾಟಕಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಅತೃಪ್ತರು ಬಹುಮತ ಸಾಬೀತು ದಿನ ಗೈರಾಗುವ ಮೂಲಕ ಸದನದ ಮ್ಯಾಜಿಕ್‌ ನಂಬರ್ 111 ಕುಸಿಯುವಂತೆ ಮಾಡ್ತಾರೆ. ಆಗ ಯಡಿಯೂರಪ್ಪ ಸುಲಭವಾಗಿ ಬಹುಮತ ಸಾಬೀತು ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸುದ್ದಿ

    ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೊಂದು ಸಿಹಿ ಸುದ್ದಿ….!

    ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…