ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.
ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.
ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..
ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…