ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…