ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.
ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.
ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.
ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.
ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.
ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..
ಆರ್ಬಿಐಗೆ ಎಷ್ಟು ನೋಟು ಬಂದಿದೆ?
ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…