News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

56

ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ

Jayanth & Victoria, Wedding Ceremony 4/22/12

ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್‍ಪಿ ಮನೀಶ್ ಕುಮಾರ್, ಎಸ್‍ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.