ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ

ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್ಪಿ ಮನೀಶ್ ಕುಮಾರ್, ಎಸ್ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…
![]()
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.