News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

56

ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ

Jayanth & Victoria, Wedding Ceremony 4/22/12

ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್‍ಪಿ ಮನೀಶ್ ಕುಮಾರ್, ಎಸ್‍ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

  • ಸುದ್ದಿ

    ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

    ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…