News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

56

ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ

Jayanth & Victoria, Wedding Ceremony 4/22/12

ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್‍ಪಿ ಮನೀಶ್ ಕುಮಾರ್, ಎಸ್‍ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…