ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು.
ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ. ಯುವಕನ ಮುಖ ಪೂರ್ತಿಯಾಗಿ ಸುಟ್ಟುಹೋಗಿದೆ. ಅಲ್ಲದೆ ಈ ಹುಡುಗಿಯ ಕೈಯ್ಯಿಗೂ ಸುಟ್ಟಗಾಯಗಳಾಗಿವೆ.
ಅದಾದ ಬಳಿಕ ಸ್ಥಳದಲ್ಲಿ ಇದ್ದವರು ಯಾರೋ ಪೊಲೀಸರಿಗೆ ಕರೆ ಮಾಡಿ, ಬೈಕ್ನಲ್ಲಿ ಹೋಗುತ್ತಿದ್ದವರ ಮೇಲೆ ಆ್ಯಸಿಡ್ ದಾಳಿಯಾಗಿದೆ ಎಂದು ವಿಷಯ ತಿಳಿಸಿದ್ದಾರೆ. ಪೊಲೀಸರು ಕೂಡ ಮೊದಲು ಬೇರೆ ಯಾರೋ ಇವರಿಬ್ಬರ ಮೇಲೆ ಆ್ಯಸಿಡ್ ಹಾಕಿದ್ದಾರೆ ಎಂದುಕೊಂಡಿದ್ದರು.
ಆದರೆ ಆ ಯುವಕ ತನ್ನ ಬಳಿ ಯುವತಿ ಹೆಲ್ಮೆಟ್ ತೆಗೆಯುವಂತೆ ಹೇಳಿದ್ದಳು ಎಂದು ಹೇಳಿಕೆ ನೀಡಿದ ಬಳಿಕ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಂತರ ಆ ಯುವತಿ ತಾನೇ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಪರ್ಸ್ನಲ್ಲಿ ಆ್ಯಸಿಡ್ ಬಾಟಲಿಯನ್ನು ಅಡಗಿಸಿ ಇಟ್ಟುಕೊಂಡು ಯುವಕನ ಮುಖಕ್ಕೆ ಎರಚಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.