News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
ಸುದ್ದಿ

ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

196
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. 
ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ ಕುರಿತಂತೆ ನಿರ್ಣಯ ಕೈಗೊಳ್ಳಲಿದೆ. ಆ ಮೂಲಕ  ಕದ್ದು ಮುಚ್ಚಿ ಹೆಚ್ಚಿನ ಮದ್ಯದ ಬಾಟೆಲ್‌ ಗಳನ್ನು ಗಡಿ ದಾಟಿಸುವ ಮದ್ಯ ಪ್ರಿಯರು ಇನ್ನು ಮುಂದೆ ರಾಜಾರೋಷವಾಗಿಯೇ ಅಧಿಕೃತವಾಗಿಯೇ ಎರಡಕ್ಕಿಂತಲೂ ಹೆಚ್ಚಿನ ಮದ್ಯದ ಬಾಟೆಲ್‌ಗಳನ್ನು ಇತರೆ ರಾಜ್ಯಗಳಿಗೆ ಕೊಂಡೊಯ್ಯಬಹುದಾಗಿದೆ.
ಇಲ್ಲಿಯ ವರೆಗೂ ಗೋವಾದಲ್ಲಿ ಮಾರುವ ಮದ್ಯವನ್ನು ಡಿಯು ಮತ್ತು ಡಮನ್‌ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಟ್ಟರೆ ಬೇರೆ ರಾಜ್ಯಗಳಿಗೆ ಸಾಗಿಸುವಂತಿರಲಿಲ್ಲ. ಆದರೆ, ಪ್ರಸ್ತುತ ಕಾನೂನು ಎಷ್ಟೇ ಬಿಗಿಯಾಗಿದ್ದರೂ ಕೆಲವು ಪ್ರವಾಸಿಗರು ಚೆಕ್‌ ಪೋಸ್ಟ್‌ಗಳಲ್ಲಿ ಲಂಚ ನೀಡಿಯಾದರೂ, ಹೆಚ್ಚಿನ ಮದ್ಯವನ್ನು ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ. ಇಂತಹ ಪ್ರವಾಸಿಗರಿಂದ ಆಗುವ ಲಾಭವನ್ನು ತಾನೇ ಪಡೆಯಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.
ಈ ಬಗ್ಗೆ ಗೋವಾವಿಧಾನಸಭೆಯಲ್ಲಿ ಮಾತನಾಡಿರುವ ಸಿಎಂ ಪ್ರಮೋದ್ ಸಾವಂತ್ ಅವರು, ಗೋವಾದಿಂದ ಅನಧಿಕೃತವಾಗಿ ಚೆಕ್ ಪೋಸ್ಟ್ಗಳಲ್ಲಿ ಅಧಿಕಾರಿಗಳಿಗೆ ಲಂಚ ನೀಡಿ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ. ಪ್ರಮುಖವಾಗಿ ಕರ್ನಾಟಕಮತ್ತು ಮಹಾರಾಷ್ಟ್ರಕ್ಕೆ ಹೆಚ್ಚಿನ ಪ್ರಮಾಣದ ಮದ್ಯ ರವಾನೆಯಾಗುತ್ತಿದೆ. ಆದರೆ ಇದರಿಂದ ಸರ್ಕಾರಕ್ಕೆಯಾವುದೇ ರೀತಿಯ ಲಾಭವಾಗುತ್ತಿಲ್ಲ. ಆದರ ಬದಲಿಗೆ ನಾವೇ ಅನುಮತಿ ನೀಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆಹಣ ಬರುವಂತೆ ಮಾಡಬಹುದು. ಅಂತೆಯೇ ಗೋವಾ ಮದ್ಯವನ್ನೂ ಈ ಮೂಲಕ ಪ್ರಚುರ ಪಡಿಸಿದಂತಾಗುತ್ತದೆ. ನಮ್ಮಆದಾಯದ ಮೂಲ ಕೂಡ ಹೆಚ್ಚಳವಾಗುತ್ತದೆ. ಈ ಬಗ್ಗೆ ತಾವು ನೆರೆಯ ರಾಜ್ಯಗಳ ಸರ್ಕಾರದೊಂದಿಗೆ ಚರ್ಚೆ ಮಾಡಲುಸಿದ್ಧ ಎಂದು ಹೇಳಿದರು.  ಪ್ರಸ್ತುತ ಗೋವಾದಿಂದವಿಮಾನದಲ್ಲಿ ವಾಪಸಾಗುವ ಪ್ರವಾಸಿಗರಿಗೆ ವಿಮಾನದಲ್ಲಿ ಮಾತ್ರ ಎರಡು (750 ಎಂಎಲ್ ನ) ‘ಐಎಂಎಲ್‌ಎಫ್‌'(ಭಾರತದಲ್ಲಿ ತಯಾರಾದ ವಿದೇಶಿ ಮದ್ಯ) ಬಾಟೆಲ್‌ ಗಳನ್ನು ಕೊಂಡೊಯ್ಯಲು ಅವಕಾಶವಿದೆ. ಆದರೆ ರಸ್ತೆ ಮಾರ್ಗದಮೂಲಕ ಮದ್ಯ ಕೊಂಡೊಯ್ಯಲು ಅವಕಾಶವಿಲ್ಲ. 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಉದ್ಯೋಗ, ಉಪಯುಕ್ತ ಮಾಹಿತಿ

    ವಿಮಾನ ಗಗನಸಖಿಯರ ಸಂಬಳ ಎಷ್ಟು ಗೊತ್ತಾ.? ಹಲವರಿಗೆ ತಿಳಿದಿಲ್ಲ ಈ ಮಾಹಿತಿ ನೋಡಿ.

    ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…

  • ಕರ್ನಾಟಕ

    ವೈದ್ಯರ ಮುಷ್ಕರದ ಪರಿಣಾಮ ರೋಗಿಗಳ ಸಾವು..!ತಿಳಿಯಲು ಈ ಲೇಖನ ಓದಿ..

    ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.