ಮನರಂಜನೆ

ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

279

ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.

‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ.

ಭಾನುವಾರದ ಸಂಚಿಕೆಯಲ್ಲಿ ದಿವಂಗತ ಅಂಬರೀಶ್ ಅವರಿಗೆ ಬಿಗ್‍ಬಾಸ್ ಸ್ಪರ್ಧಿಗಳು ಹಾಡುಗಳನ್ನು ಹೇಳುವ ಮೂಲಕ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದರು. ಈ ವೇಳೆ ಸ್ಪರ್ಧಿಗಳು ಅಂಬರೀಶ್ ಬಗ್ಗೆ ತನ್ನ ಅನಿಸಿಕೆಗಳನ್ನು ಹೇಳಿಕೊಂಡಿದ್ದರು.

ಸೋನು ಪಾಟೀಲ್ ಮಾತನಾಡಿ, ಈಗಾಗಲೇ ನಾನು ಬೆಂಗಳೂರಿಗೆ ಬಂದು ತುಂಬಾ ಕಷ್ಟ ಪಟ್ಟಿದ್ದೀನಿ ಅಂತ ನಿಮೆಲ್ಲರಿಗೂ ಗೊತ್ತಿದೆ. ನಾನು ಬೆಂಗಳೂರಿಗೆ ಬಂದು ಅಂಬರೀಶ್ ಅವರ ಮನೆಯಲ್ಲಿ ಹೊಟ್ಟೆ ತುಂಬಾ ಊಟ ಮಾಡಿದ್ದೇನೆ. ನಾನು ನಗರಕ್ಕೆ ಬಂದಾಗ ಹಣ ಮತ್ತು ತಿನ್ನಲೂ ಊಟವೂ ಇರಲಿಲ್ಲ. ಕೆಲಸಕ್ಕಾಗಿ ಅಲೆದಾಡುತ್ತಿದ್ದೆ. ಆಗ ಜೆ.ಪಿ ನಗರದಲ್ಲಿ ಯಾವುದೋ ಕೆಲಸ ಇದೆ ಎಂದು ಹೇಳಿದಾಗ ನಾನು ಅಲ್ಲಿಗೆ ಹೋದೆ.

ನಮ್ಮ ತಾಯಿ ಅಂಬರೀಶ್ ಅವರ ಅಭಿಮಾನಿ. ಆದ್ದರಿಂದ ನಾನು ಒಮ್ಮೆ ಅಂಬರೀಶ್ ಅವರನ್ನು ಭೇಟಿ ಮಾಡಬೇಕು ಎಂದು ಅವರ ಮನೆಗೆ ಹೋಗಿದ್ದೆ. ನಾವು ಉತ್ತರ ಕರ್ನಾಟಕದವರು, ನಮ್ಮ ತಂದೆ ಒಬ್ಬ ರೈತರು, ಈಗ ಅವರಿಗೆ ಹೃದಯ ಕಸಿಮಾಡಿಸಬೇಕು ಎಂದು ಹೇಳಿಕೊಂಡೆ. ನಾನು ಉತ್ತರ ಕರ್ನಾಟಕ ಎಂದಾಕ್ಷಣ, ಅವರು ನೀವು ಕಲಾವಿದರಿಗೆ ಬಹಳ ಗೌರವ ಕೊಡುತ್ತೀರಿ. ನಿಮ್ಮನ್ನು ಗೌರವಿಸಬೇಕಾದುದ್ದು ನಮ್ಮ ಕರ್ತವ್ಯ ಎಂದು ಕೂರಿಸಿಕೊಂಡು ಮಾತನಾಡಿಸಿದರು ಅಂತ ಸೋನು ಹೇಳಿಕೊಂಡಿದ್ದಾರೆ.

ಅವರು ನೀನು ಊಟ ಮಾಡಿ ಬಹಳ ದಿನವಾಗಿದೆ ಅನ್ನಿಸುತ್ತಿದೆ, ಊಟ ಮಾಡು ಎಂದು ಹೇಳಿದರು. ನಿಜ ಹೇಳಬೇಕು ಅಂದರೆ ನನಗೆ ತುಂಬಾ ಹೊಟ್ಟೆ ಹಸಿವಾಗುತ್ತಿತ್ತು. ಕೊನೆಗೆ ಅವರ ಪಕ್ಕದಲ್ಲಿಯೇ ಕೂರಿಸಿಕೊಂಡು ಊಟ ಹಾಕಿದರು. ಅದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ ತುಂಬಾ ಹೊಟ್ಟೆ ಹಸಿವಾದಾಗ ನನಗೆ ಊಟ ಹಾಕಿದ ಮೊದಲ ವ್ಯಕ್ತಿ ಅವರಾಗಿದ್ದಾರೆ.

ಇಂದು ಅವರು ನಮ್ಮ ಮಧ್ಯೆ ಇಲ್ಲ. ಆದರೆ ನಮ್ಮ ಮನಸ್ಸಿನಲ್ಲಿ ಸದಾ ಇರುತ್ತಾರೆ. ಮತ್ತೆ ಈ ಕನ್ನಡನಾಡಿನಲ್ಲಿ ಹುಟ್ಟಿ ಬರಬೇಕು ಎಂದು ಅಂಬಿ ಜೊತೆಗಿನ ಕ್ಷಣವನ್ನು ಹೇಳಿಕೊಂಡು ಸೋನು ಪಾಟೀಲ್ ಕಣ್ಣೀರು ಹಾಕಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಸುದ್ದಿ

    ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

    ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ…

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ಸುದ್ದಿ

    ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

    ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.